Homeಕರ್ನಾಟಕಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

- Advertisement -
- Advertisement -

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಕೊನೆಗೂ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಮುಂದಿನ ಸಿಎಂ ಯಾರಾಗುತ್ತಾರೆ ಎಂಬುವುದು ಕೂಡಾ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಪ್ರಸ್ತುತ ರಾಜ್ಯದ ಸಂಪುಟದಲ್ಲಿ ಸಚಿವರಾಗಿರುವ ಮುರುಗೇಶ್‌ ನಿರಾಣಿ, ಬಸವರಾಜ್‌ ಬೊಮ್ಮಾಯಿ ಹಾಗೂ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ್‌ ಜೋಷಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್‌ ಸಂತೋಷ್‌‌ ಪ್ರಸ್ತುತ ಸಿಎಂ ಆಕಾಂಕ್ಷಿಗಳು ಎಂದು ಬಿಂಬಿಸಲ್ಪಡುತ್ತಿದ್ದಾರೆ.

ಈ ಪೈಕಿ ಮುರುಗೇಶ್‌ ನಿರಾಣಿ ಅವರನ್ನು ಮುಂದಿನ ಸಿಎಂ ಅಗಿ ಬಿಜೆಪಿ ಹೈಕಮಾಂಡ್‌ ಘೋಷಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ. ಅಲ್ಲದೆ, ಉಪ ಮುಖ್ಯಮಂತ್ರಿಯಾಗಿ ಶ್ರೀರಾಮುಲು ಮತ್ತು ಇನ್ನೊಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಯಡಿಯೂರಪ್ಪ ಅವರು ದೆಹಲಿ ಭೇಟಿ ಮುಗಿಸಿ ವಾಪಾಸು ರಾಜ್ಯಕ್ಕೆ ಬಂದ ಬಳಿಕ, ಮುರುಗೇಶ್‌ ನಿರಾಣಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಸಿಎಂ ಸ್ಥಾನಕ್ಕಾಗಿ ಬಿಜೆಪಿ ಹೈಕಮಾಂಡ್‌ ಮುಂದೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೆ, ಬಿಜೆಪಿಯಲ್ಲೇ ಇದ್ದುಕೊಂಡು, ಬಿಜೆಪಿ ನಾಯಕರ ವಿರುದ್ದವೇ ಸದಾ ಬುಸುಗುಡುತ್ತಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ಕೂಡಾ, ಸಿಎಂ ಸ್ಥಾನಕ್ಕೆ ನಿರಾಣಿ ಭಾರೀ ಲಾಬಿ ನಡೆಸುತ್ತಿದ್ಧಾರೆ ಎಂದು ಇತ್ತೀಚೆಗೆ ಆರೋಪಿಸಿದ್ದರು.

ಮುರುಗೇಶ್‌ ನಿರಾಣಿ ಅವರು ಯಡಿಯೂರಪ್ಪ ಸರ್ಕಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾಗಿದ್ದು, ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾರೆ.

ಈ ನಡುವೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರ ಹೆಸರು ಕೂಡಾ ಕೇಳಿಬಂದಿತ್ತಾದರೂ, ಕಳೆದ ಒಂದೆರೆಡು ದಿನಗಳಿಂದ ಅದು ಹಿನ್ನಲೆಗೆ ಸರಿದಿದೆ.

ಇದನ್ನೂ ಓದಿ: ರಾಜೀನಾಮೆ ನೀಡುವಂತೆ ಯಾರು ಒತ್ತಡ ತಂದಿಲ್ಲ: ಬಿ.ಎಸ್ ಯಡಿಯೂರಪ್ಪ

ಮುರುಗೇಶ್‌ ನಿರಾಣಿ 2004 ರಲ್ಲಿ ಮೊದಲ ಬಾರಿಗೆ ಬೀಳಗಿ ಕ್ಷೇತ್ರದಿಂದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದರು. 2008 ರಲ್ಲಿ ಮತ್ತೆ ಆಯ್ಕೆಯಾದ ನಿರಾಣಿ, ಯಡಿಯೂರಪ್ಪ ಸರಕಾರದಲ್ಲಿ ಸಚಿವರಾಗಿದ್ದರು. 2008 ರಿಂದ 2014 ರವರೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಬಿಜೆಪಿ ಸರಕಾರದಲ್ಲಿ ಕಾರ್ಯನಿರ್ವಹಿಸಿದ್ದ ನಿರಾಣಿ, ಸಚಿವರಾಗಿದ್ದೂ 2014ರಲ್ಲಿ ಸೋಲುಂಡಿದ್ದರು. ಮತ್ತೆ 2018 ರಲ್ಲಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ವರ್ಷಗಳ ಹಿಂದೆ ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗ ಎರಡನೇ ಬಾರಿ ಸಚಿವರಾಗಿ ಯಡಿಯೂರಪ್ಪ ಸಂಪುಟಕ್ಕೆ ಮರು ಪ್ರವೇಶ ಪಡೆದಿದ್ದರು.

“ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ” ಎಂದು ನಿರಾಣಿ ಇತ್ತೀಚೆಗಷ್ಟೇ ಹೇಳಿದ್ದರು.

“ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವೆಲ್ಲರೂ ಬದ್ದರಾಗಿರುತ್ತೇವೆ” ಎಂದು ಅವರು ಅಂದು ಹೇಳಿದ್ದರು.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...