Homeಕರ್ನಾಟಕಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; 'ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ' ಎಂದ ಪರಮೇಶ್ವರ್

ಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್

- Advertisement -
- Advertisement -

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ, ಈ ಅಪರಾಧವನ್ನು ತಳ್ಳಿಹಾಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.”ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಕಿರುಕುಳ ನಡೆಯುತ್ತವೆ” ಎಂದು  ಹೇಳಿದ್ದಾರೆ.

“ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು-ಇಲ್ಲೊಂದು ಘಟನೆಗಳು ನಡೆಯುತ್ತವೆ. ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕಾನೂನಿನ ಪ್ರಕಾರ ಮಾಡಲಾಗುತ್ತದೆ. ಬೀಟ್ ಪೆಟ್ರೋಲಿಂಗ್ ಅನ್ನು ಹೆಚ್ಚಿಸಲು ನಾನು ನಮ್ಮ ಆಯುಕ್ತರಿಗೆ ಸೂಚಿಸಿದ್ದೇನೆ” ಎಂದು ಗೃಹ ಸಚಿವರು ಹೇಳಿದರು.

ಈ ಘಟನೆ ಏಪ್ರಿಲ್ 3, 2025 ರಂದು ಬಿಟಿಎಂ ಲೇಔಟ್‌ನಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ಹಿಂಬಾಲಿಸುತ್ತಿರುವುದನ್ನು ತೋರಿಸಲಾಗಿದೆ, ಆಕೆಯ ಜೊತೆ ಮತ್ತೊಬ್ಬ ಮಹಿಳೆ ಇದ್ದಳು, ವಿಕೃತ ವ್ಯಕ್ತ ಮಹಿಳೆಯನ್ನು ಅಪ್ಪಿಕೊಂಡು ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತವಾದ ನಂತರ ಬೆಂಗಳೂರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಸಂತ್ರಸ್ತೆ ಇನ್ನೂ ದೂರು ದಾಖಲಿಸಿಲ್ಲ.

ಸೆಕ್ಷನ್ 354ಬಿ (ಮಹಿಳೆಯ ಮೇಲೆ ವಿವಸ್ತ್ರಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ವರ್ಷ, ಆಗಸ್ಟ್‌ನಲ್ಲಿ ಇದೇ ರೀತಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ಬೆಳಗಿನ ನಡಿಗೆಯಲ್ಲಿ ಮಹಿಳೆಯೊಬ್ಬಳ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಕ್ಯಾಬ್ ಚಾಲಕನಾಗಿದ್ದ ಆರೋಪಿಯನ್ನು ಘಟನೆ ನಡೆದ ಎರಡು ದಿನಗಳ ನಂತರ ಬಂಧಿಸಲಾಯಿತು.

ಕಳೆದ ವರ್ಷ ಹಂಚಿಕೊಂಡ ಸರ್ಕಾರಿ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ 2023 ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಪೊಲೀಸರು 3,260 ಪ್ರಕರಣಗಳನ್ನು ದಾಖಲಿಸಿದ್ದಾರೆ, ಇದರಲ್ಲಿ 1,135 ಕಿರುಕುಳಕ್ಕೆ ಸಂಬಂಧಿಸಿದವು ಸೇರಿವೆ.

ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...