Homeಕರ್ನಾಟಕಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

ಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

- Advertisement -
- Advertisement -

“ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು” ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವೇದಕಾಲದ ಸಾವಿರ ವರ್ಷಗಳ ಕಾಲ (1500-500 BCE), ಯಾವುದೇ ದೇವಾಲಯಗಳು ಇರಲಿಲ್ಲ. ಬುದ್ಧ ಮತ್ತು ಬೌದ್ಧ ಸ್ತೂಪಗಳು/ಪಗೋಡಗಳನ್ನು ಸಹಸ್ರಮಾನದವರೆಗೆ ಶಾಶ್ವತಗೊಳಿಸಿದ ನಂತರ, ಹಿಂದೂ ದೇವಾಲಯಗಳು ಅಸ್ತಿತ್ವಕ್ಕೆ ಬಂದವು” ಎಂದಿದ್ದಾರೆ.

ಮುಂದುವರಿದು, “ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು’’ ಎಂದು ಅವರು ಪ್ರತಿಪಾದಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಬುಧವಾರ ದಕ್ಷಿಣ ಕನ್ನಡದಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸುತ್ತಿದ್ದ ಮುಸ್ಲಿಂ ದಂಪತಿಗಳನ್ನು, ಧರ್ಮಾಂಧ ಮುಸ್ಲಿಂ ಯುವಕರು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿದರು. ಈ ಚಲನಚಿತ್ರವು ‘ಹಿಂದೂ ಸಂಸ್ಕೃತಿ’ಯನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

“ಸಾಂಸ್ಕೃತಿಕ/ಸೈದ್ಧಾಂತಿಕ ಬಹುತ್ವವೇ ನಮ್ಮ ರಾಷ್ಟ್ರದ ತಳಹದಿ. ಇಂತಹ ಅಸಹಿಷ್ಣುತೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಗಳನ್ನು ನಾವು ಖಂಡಿಸುತ್ತೇವೆ” ಎಂದು ಚೇತನ್ ಹೇಳಿದ್ದಾರೆ.

ಇತ್ತೀಚೆಗೆ ಕಾಂತಾರ ಸಿನಿಮಾ ಕುರಿತು ಮಾತನಾಡಿ ಚೇತನ್‌ ಚರ್ಚೆಯಲ್ಲಿದ್ದರು. “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದು ಪೋಸ್ಟ್‌ ಮಾಡಿದ್ದರು.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದರು.

ಹಿಂದೂ ದೇವಾಲಯವಲ್ಲ: ಮದ್ರಾಸ್ ಕೋರ್ಟ್ ತೀರ್ಪು

ಹಿಂದೂ ದೇವಾಲಯಗಳ ಇತಿಹಾಸ ಕೆದಕಿದರೆ ಬೌದ್ಧಸ್ತೂಪಗಳು ದೊರಕುತ್ತವೆ ಎಂಬ ಚರ್ಚೆ ಮೊದಲಿನಿಂದಲೂ ಇದ್ದು, “ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ” ಎಂದು ಮದ್ರಾಸ್ ಹೈಕೋರ್ಟ್ ಕೆಲವು ತಿಂಗಳ ಹಿಂದೆ ಹೇಳಿತ್ತು.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಶುಚಿಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದಿದ್ದವು.

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದರು. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

“ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು” ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬೌದ್ದರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು ಎನ್ನುವ ಪ್ರತಿಪಾದನೆ ಸರಿ ಇದೆ. ಆ ದಿಕ್ಕಿನಲ್ಲಿ ಯೋಚಿಸಬೇಕು.👍💐

  2. ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಙ್ನಾನದಿಂದ ಅವರ ಕಸ್ಸೇಸ್ ಪರೀಕ್ಷೆಗೆ ಅವರ ದುಡ್ಡು ತೇಗೆದುಕೊಂಡು ಸರ್ಟೀಪಿಕೇಟ್ ಹೊಂದಿದವರು ಪೂಜೆ ಮಾಡಲು ಅರ್ಹತೆ ಹೊದಿರುವರು ಎಂದು ಗುರುತಿಸಬಹುದು ಮಾಂತ್ರಿಕ ರಿಂದ ಆಗುವ ಶೋಷಣೆ ತಡೆಯಬಹುದು ಜೀವವುಳ್ಳ ದೇವರನ್ನು ಆರಾಧಿಸುವ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...