Homeಕರ್ನಾಟಕಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

ಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

- Advertisement -
- Advertisement -

“ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು” ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವೇದಕಾಲದ ಸಾವಿರ ವರ್ಷಗಳ ಕಾಲ (1500-500 BCE), ಯಾವುದೇ ದೇವಾಲಯಗಳು ಇರಲಿಲ್ಲ. ಬುದ್ಧ ಮತ್ತು ಬೌದ್ಧ ಸ್ತೂಪಗಳು/ಪಗೋಡಗಳನ್ನು ಸಹಸ್ರಮಾನದವರೆಗೆ ಶಾಶ್ವತಗೊಳಿಸಿದ ನಂತರ, ಹಿಂದೂ ದೇವಾಲಯಗಳು ಅಸ್ತಿತ್ವಕ್ಕೆ ಬಂದವು” ಎಂದಿದ್ದಾರೆ.

ಮುಂದುವರಿದು, “ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು’’ ಎಂದು ಅವರು ಪ್ರತಿಪಾದಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಬುಧವಾರ ದಕ್ಷಿಣ ಕನ್ನಡದಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸುತ್ತಿದ್ದ ಮುಸ್ಲಿಂ ದಂಪತಿಗಳನ್ನು, ಧರ್ಮಾಂಧ ಮುಸ್ಲಿಂ ಯುವಕರು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿದರು. ಈ ಚಲನಚಿತ್ರವು ‘ಹಿಂದೂ ಸಂಸ್ಕೃತಿ’ಯನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

“ಸಾಂಸ್ಕೃತಿಕ/ಸೈದ್ಧಾಂತಿಕ ಬಹುತ್ವವೇ ನಮ್ಮ ರಾಷ್ಟ್ರದ ತಳಹದಿ. ಇಂತಹ ಅಸಹಿಷ್ಣುತೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಗಳನ್ನು ನಾವು ಖಂಡಿಸುತ್ತೇವೆ” ಎಂದು ಚೇತನ್ ಹೇಳಿದ್ದಾರೆ.

ಇತ್ತೀಚೆಗೆ ಕಾಂತಾರ ಸಿನಿಮಾ ಕುರಿತು ಮಾತನಾಡಿ ಚೇತನ್‌ ಚರ್ಚೆಯಲ್ಲಿದ್ದರು. “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದು ಪೋಸ್ಟ್‌ ಮಾಡಿದ್ದರು.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದರು.

ಹಿಂದೂ ದೇವಾಲಯವಲ್ಲ: ಮದ್ರಾಸ್ ಕೋರ್ಟ್ ತೀರ್ಪು

ಹಿಂದೂ ದೇವಾಲಯಗಳ ಇತಿಹಾಸ ಕೆದಕಿದರೆ ಬೌದ್ಧಸ್ತೂಪಗಳು ದೊರಕುತ್ತವೆ ಎಂಬ ಚರ್ಚೆ ಮೊದಲಿನಿಂದಲೂ ಇದ್ದು, “ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ” ಎಂದು ಮದ್ರಾಸ್ ಹೈಕೋರ್ಟ್ ಕೆಲವು ತಿಂಗಳ ಹಿಂದೆ ಹೇಳಿತ್ತು.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಶುಚಿಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದಿದ್ದವು.

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದರು. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

“ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು” ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬೌದ್ದರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು ಎನ್ನುವ ಪ್ರತಿಪಾದನೆ ಸರಿ ಇದೆ. ಆ ದಿಕ್ಕಿನಲ್ಲಿ ಯೋಚಿಸಬೇಕು.👍💐

  2. ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಙ್ನಾನದಿಂದ ಅವರ ಕಸ್ಸೇಸ್ ಪರೀಕ್ಷೆಗೆ ಅವರ ದುಡ್ಡು ತೇಗೆದುಕೊಂಡು ಸರ್ಟೀಪಿಕೇಟ್ ಹೊಂದಿದವರು ಪೂಜೆ ಮಾಡಲು ಅರ್ಹತೆ ಹೊದಿರುವರು ಎಂದು ಗುರುತಿಸಬಹುದು ಮಾಂತ್ರಿಕ ರಿಂದ ಆಗುವ ಶೋಷಣೆ ತಡೆಯಬಹುದು ಜೀವವುಳ್ಳ ದೇವರನ್ನು ಆರಾಧಿಸುವ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...