HomeಮುಖಪುಟBudget-2022 | ಬಜೆಟ್‌-2022 | ಪ್ರಮುಖ ಅಂಶಗಳು

Budget-2022 | ಬಜೆಟ್‌-2022 | ಪ್ರಮುಖ ಅಂಶಗಳು

- Advertisement -
- Advertisement -

ಒಕ್ಕೂಟ ಸರ್ಕಾರದ ಬಜೆಟ್‌ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ Budget-2022 ಭಾಷಣವನ್ನು ಅಧಿವೇಶನದಲ್ಲಿ ಮಾಡಿದ್ದಾರೆ. ಅವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 80 ಲಕ್ಷ ಮನೆಗಳು

2022-23 ರಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗುರುತಿಸಲಾದ ಅರ್ಹ ಫಲಾನುಭವಿಗಳಿಗೆ 80 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ.

ಈ ಯೋಜನೆಗೆ 48,000 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಒಕ್ಕೂಟ ಸರ್ಕಾರವು ಯೋಜನೆಯ ವಸತಿ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಭೂಮಿ ಮತ್ತು ನಿರ್ಮಾಣ ಸಂಬಂಧಿತ ಅನುಮೋದನೆಗಳಿಗೆ ಅಗತ್ಯವಿರುವ ಸಮಯವನ್ನು ಕಡಿಮೆ ಮಾಡಿದೆ. ನಗರ ಪ್ರದೇಶಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ನೆರವು ನೀಡಲು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಜೆಟ್‌‌ 2022: ಒಕ್ಕೂಟ ಸರ್ಕಾರದ ಮೇಲೆ ಜನರ ನಿರೀಕ್ಷೆಗಳೇನು?

ಮಾನಸಿಕ ಆರೋಗ್ಯ ಕಾರ್ಯಕ್ರಮಗಳ ಆರಂಭ

ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಕಾರ್ಯಕ್ರಮಕ್ಕೆ ಬೆಂಗಳೂರಿನ ಐಐಟಿ ಸಂಸ್ಥೆಯು ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ಅವರು ವಿವರಿಸಿದ್ದಾರೆ.

ಮುಂದಿನ 3 ವರ್ಷಗಳಲ್ಲಿ 400 ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸಲಾಗುವುದು

ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು. ಮೆಟ್ರೋ ವ್ಯವಸ್ಥೆಗಳನ್ನು ನಿರ್ಮಿಸಲು ನವೀನ ಮಾರ್ಗಗಳನ್ನು ಅಳವಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಡಿಜಿಟಲ್ ಶಿಕ್ಷಣಕ್ಕೆ ಸರ್ಕಾರದ ಮೆಗಾ ಪುಶ್

ಐಎಸ್‌ಟಿಇ ಮಾನದಂಡಗಳೊಂದಿಗೆ ವಿಶ್ವ ದರ್ಜೆಯ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಒದಗಿಸಲು ಡಿಜಿಟಲ್ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ವಿತ್ತ ಸಚಿವೆ ಹೇಳಿದ್ದಾರೆ.

‘ಒಂದು ವರ್ಗ, ಒಂದು ಟಿವಿ ಚಾನೆಲ್’ ಎಂಬ ಉದ್ದೇಶದೊಂದಿಗೆ PM eVIDYA ಕಾರ್ಯಕ್ರಮವನ್ನು 12 ರಿಂದ 200 ಟಿವಿ ಚಾನೆಲ್‌ಗಳಿಗೆ ವಿಸ್ತರಿಸಲಾಗುವುದು. ಇದು ಕೊರೊನಾ ಸಂದರ್ಭದಲ್ಲಿ 1 ರಿಂದ 12 ನೇ ತರಗತಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಪೂರಕ ಶಿಕ್ಷಣವನ್ನು ಒದಗಿಸಲು ಎಲ್ಲಾ ರಾಜ್ಯಗಳಿಗೆ ಅನುವು ಮಾಡಿಕೊಡುತ್ತದೆ” ಎಂದು ಅವರು ಸಂಸತ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ತತ್ವದ ಹಿನ್ನೆಲೆಯಲ್ಲಿ 2022-23 ಬಜೆಟ್ ಪೂರ್ವ ಚರ್ಚೆ

ನೈಸರ್ಗಿಕ ಮತ್ತು ಸಾವಯವ ಕೃಷಿ, ಆಧುನಿಕ ಕೃಷಿಯ ಅಗತ್ಯಗಳನ್ನು ಪೂರೈಸಲು ಕೃಷಿ ವಿಶ್ವವಿದ್ಯಾಲಯಗಳ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಎರಡು ವರ್ಷಗಳ ಔಪಚಾರಿಕ ಶಿಕ್ಷಣವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ, ಮಕ್ಕಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಪ್ರಾದೇಶಿಕ ಭಾಷೆಗಳಲ್ಲಿ ಉತ್ತಮ ಗುಣಮಟ್ಟದ ಇ-ಕಂಟೆಂಟ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸೀತಾರಾಮನ್ ತಿಳಿಸಿದ್ದಾರೆ.

ಡಿಜಿಟಲ್ ರೂಪಾಯಿಯನ್ನು ವಿತರಣೆ – ಬಿಟ್‌ಕಾಯಿನ್ ಭವಿಷ್ಯ ಅಸ್ಪಷ್ಟ!

ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ಡಿಜಿಟಲ್ ರೂಪಾಯಿಯನ್ನು ಬಿಡುಗಡೆ ಮಾಡಲಿದೆ. ಇದು ಡಿಜಿಟಲ್ ಕರೆನ್ಸಿ ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಆಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೃಢಪಡಿಸಿದ್ದಾರೆ.

ಆರ್‌ಬಿಐನಿಂದ ಬಿಡುಗಡೆಯಾಗುವ ಡಿಜಿಟಲ್ ಕರೆನ್ಸಿಯು ಬಿಟ್‌ಕಾಯಿನ್ ಮತ್ತು ಇತರ ಜನಪ್ರಿಯ ಕ್ರಿರ್ಪ್ಟೋಕರೆನ್ಸಿಗಳ ಹಿಂದಿರುವ ತಂತ್ರಜ್ಞಾನವಾದ ಬ್ಲಾಕ್‌ಚೈನ್ ತಂತ್ರಜ್ಞಾನವನ್ನು ಆಧರಿಸಿದೆ ಎಂದು ಅವರು ಹೇಳಿದ್ದಾರೆ. ಆದರೆ, ಬಿಟ್‌ಕಾಯಿನ್ ಮತ್ತು ಇತರ ಕ್ರಿಪ್ಟೋ ಟೋಕನ್‌ಗಳ ಭವಿಷ್ಯದ ಬಗ್ಗೆ ಯಾವುದೇ ಸ್ಪಷ್ಟತೆಯನ್ನು ಅವರು ನೀಡಿಲ್ಲ.

ಇದನ್ನೂ ಓದಿ:ತಮಿಳುನಾಡು ಬಜೆಟ್ 2021: ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಕಡಿತ 

“ಡಿಜಿಟಲ್ ಕರೆನ್ಸಿಯು ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆ ಇರುತ್ತದೆ. ಆದ್ದರಿಂದ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಇದನ್ನು 2022-23 ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡುತ್ತದೆ” ಎಂದು ಹಣಕಾಸು ಸಚಿವೆ ಹೇಳಿದ್ದಾರೆ.

ಆರ್‌ಬಿಐ ಕಳೆದ ವರ್ಷ ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು. ಆ ಸಮಯದಲ್ಲಿ, ದೇಶದಲ್ಲಿ ಕ್ರಿಪ್ಟೋಕರೆನ್ಸಿಗಳ ಬಳಕೆಯನ್ನು ನಿಷೇಧಿಸಲು ಸರ್ಕಾರ ಯೋಜಿಸಿತ್ತು. ಆದಾಗ್ಯೂ, ಪ್ರಮುಖ ಮಧ್ಯಸ್ಥಗಾರರೊಂದಿಗೆ ಮಾತುಕತೆ ನಡೆಸಲು ಮತ್ತು ದೇಶದಲ್ಲಿ ಕ್ರಿಪ್ಟೋಕರೆನ್ಸಿಗಳ ಭವಿಷ್ಯದ ಬಗ್ಗೆ ಶಿಫಾರಸುಗಳನ್ನು ನೀಡಲು ಸಮಿತಿಯನ್ನು ರಚಿಸಲಾಗಿತ್ತು.

ನಂತರ, ಆರ್‌ಬಿಐನಿಂದ ಸಂಭವನೀಯ ಡಿಜಿಟಲ್ ಕರೆನ್ಸಿಯನ್ನು ತರಲು ಸರ್ಕಾರವು ದೇಶದಲ್ಲಿ ಎಲ್ಲಾ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಬಹುದು ಎಂದು ಸಮಿತಿ ಸೂಚಿಸಿತ್ತು.

ಕ್ರಿಪ್ಟೋ ತೆರಿಗೆ ಘೋಷಿಣೆ

ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್‌ ಭಾಷಣದಲ್ಲಿ, ಹೊಸ ಕ್ರಿಪ್ಟೋ ತೆರಿಗೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದ್ದಾರೆ. ಅದರ ಅಡಿಯಲ್ಲಿ ವರ್ಚುವಲ್ ಡಿಜಿಟಲ್ ಆಸ್ತಿಗಳಿಗೆ ದೇಶದಲ್ಲಿ 30% ತೆರಿಗೆ ವಿಧಿಸಲಾಗುವುದು. ನಷ್ಟದ ಸಂದರ್ಭದಲ್ಲಿ ಯಾವುದೇ ಸೆಟ್ ಆಫ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮಾತ್ರವಲ್ಲದೆ, ವರ್ಚುವಲ್ ಡಿಜಿಟಲ್ ಸ್ವತ್ತುಗಳಲ್ಲಿ ಉಡುಗೊರೆಗಳ ಮೇಲೂ ತೆರಿಗೆ ವಿಧಿಸಲಾಗುತ್ತದೆ.

ಇದನ್ನೂ ಓದಿ: ದೆಹಲಿ ಬಜೆಟ್‌ನ ಶೇ. 25ರಷ್ಟು ಹಣ ಶಿಕ್ಷಣಕ್ಕಾಗಿ ಮೀಸಲಿಟ್ಟಿದ್ದೇವೆ: ಆತಿಶಿ ಮಾರ್ಲೇನಾ

ಇತರ ತೆರಿಗೆ

ತೆರಿಗೆದಾರರು ಇನ್ನುಮುಂದೆ 2 ವರ್ಷಗಳಲ್ಲಿ ಐಟಿ ರಿಟರ್ನ್ಸ್ ಅನ್ನು ನವೀಕರಿಸಬಹುದು ಎಂದು ಘೋಷಿಸಿದ್ದಾರೆ. “ದೋಷವನ್ನು ಸರಿಪಡಿಸಲು ಅವಕಾಶವನ್ನು ಒದಗಿಸಲು, ತೆರಿಗೆದಾರರು 2 ವರ್ಷಗಳೊಳಗೆ ನವೀಕರಿಸಿದ ರಿಟರ್ನ್ ಅನ್ನು ಸಲ್ಲಿಸಬಹುದು” ಎಂದು ಅವರು ಹೇಳಿದ್ದಾರೆ.

ಸಹಕಾರಿ ಸಂಸ್ಥೆಗಳು ಮತ್ತು ಕಾರ್ಪೊರೇಟ್‌ಗಳ ನಡುವೆ ಸಮತಟ್ಟಾದ ವ್ಯವಸ್ಥೆಯನ್ನು ಒದಗಿಸಲು ಸಹಕಾರ ಸಂಘಗಳಿಗೆ ವಿಧಿಸುವ ತೆರಿಗೆಯನ್ನು 15%ಗೆ ಇಳಿಸಲಾಗಿದೆ. ಅಲ್ಲದೆ. ಸಹಾಕಾರ ಸಂಘಗಳ ಮೇಲಿನ ಹೆಚ್ಚುವರಿ ಶುಲ್ಕವನ್ನು 7%ಗೆ ಇಳಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತೆಗೆ ಸಹಾಯ ಮಾಡಲು ಮತ್ತು ಅವರನ್ನು ಕೇಂದ್ರ ಸರ್ಕಾರಿ ನೌಕರರಿಗೆ ಸಮಾನವಾಗಿ ಮೇಲೆತ್ತಲು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು 10% ರಿಂದ 14%ಗೆ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪಾಲಿಶ್ ಮಾಡಿದ ವಜ್ರಗಳು, ರತ್ನದ ಕಲ್ಲುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು 5%ಗೆ ಕಡಿತಗೊಳಿಸಲಾಗಿದೆ. ಸಾನ್ ವಜ್ರಗಳಿಗೆ ವಿನಾಯಿತಿ ನೀಡಲಾಗುತ್ತದೆ. ಇ-ಕಾಮರ್ಸ್ ಮೂಲಕ ಆಭರಣಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ, ಈ ವರ್ಷದ ಜೂನ್ ವೇಳೆಗೆ ಸರಳೀಕೃತ ನಿಯಮಗಳು ಜಾರಿಗೆ ಬರಲಿವೆ.

ಯಾವುದೇ ರೀತಿಯ ಸ್ವತ್ತುಗಳ ವರ್ಗಾವಣೆಯ ಮೇಲೆ ಉಂಟಾಗುವ LTCG ಮೇಲಿನ ಹೆಚ್ಚುವರಿ ಶುಲ್ಕವನ್ನು 15%ಗೆ ಮಿತಿಗೊಳಿಸಲು ಪ್ರಸ್ತಾಪಿಸಲಾಗಿದೆ. ಇದು ಸ್ಟಾರ್ಟಪ್‌ಗಳಿಗೆ ಉತ್ತೇಜನ ನೀಡುತ್ತದೆ ಎಂದು ಸಚಿವೆ Budget-2022 ಭಾಷಣದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಬಜೆಟ್‌ನಲ್ಲಿ ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿಗೆ 15,000 ಕೋಟಿ ಮಂಜೂರು?: ವಾಸ್ತವವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಧ್ಯಂತರ ಜಾಮೀನು ನೀಡಿದ್ರೆ, ಕೇಜ್ರವಾಲ್‌ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸಬಾರದು: ಸುಪ್ರೀಂಕೋರ್ಟ್

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿದರೆ, ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಅವಕಾಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆಪಾದಿತ ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧನದ ವಿರುದ್ಧ ಕೇಜ್ರಿವಾಲ್ ಸಲ್ಲಿಸಿದ...