Homeಕರ್ನಾಟಕ2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

- Advertisement -
- Advertisement -

2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಅಭಿಪ್ರಾಯಪಟ್ಟಿದ್ದಾರೆ.

ಹಣಕಾಸು ಜವಾಬ್ದಾರಿ ಹೊತ್ತಿರುವ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗದೆ ಎಂದು ಅವರು ಹೇಳಿದ್ದಾರೆ.

ಈ ಮೂಲಕ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಷೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಮುಖ್ಯ ಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ; ಅತ್ಯಂತ ಶಿಥಿಲವಾದ ಹಾಗು ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 1೦೦ ಕೋಟಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನವನ್ನು 20000 ನ್ನು 45000 ಕ್ಕೆ ಏರಿಸಲು 153 ಕೋಟಿ ; ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ ;ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗು ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ; ಸಾಟ್ಸ್‌ (Students Achievement Tracking System) ನ್ನು 2.0 ಗೆ ಮೇಲ್ದರ್ಜೆಗೇರಿಸಲು ಕ್ರಮ ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು ಮುಖ್ಯ ಮಂತ್ರಿಗಳಿಗೆ ಹಾಗು ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ , ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ; ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...