Homeಕರ್ನಾಟಕ2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

2023-24ರ ಆಯವ್ಯಯ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ: ನಿರಂಜನಾರಾಧ್ಯ.ವಿ.ಪಿ

- Advertisement -
- Advertisement -

2023-24ರ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹಣ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಪೂರಕವಾಗಿದೆ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಅಭಿಪ್ರಾಯಪಟ್ಟಿದ್ದಾರೆ.

ಹಣಕಾಸು ಜವಾಬ್ದಾರಿ ಹೊತ್ತಿರುವ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಮಂಡಿಸಿದ ಆಯವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗು ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗದೆ ಎಂದು ಅವರು ಹೇಳಿದ್ದಾರೆ.

ಈ ಮೂಲಕ ಶಿಕ್ಷಣ ಹಕ್ಕು ಕಾಯಿದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸರ್ಕಾರವು ಬದ್ಧವಾಗಿದೆ ಎಂಬ ಭರವಷೆಯನ್ನು ಆಯವ್ಯಯ ನೀಡಿದೆ. ಈ ಕಾರಣಕ್ಕಾಗಿ ನಾನು ಮಾನ್ಯ ಮುಖ್ಯ ಮಂತ್ರಿಗಳನ್ನು ಸರ್ಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ಆಯವ್ಯಯದಲ್ಲಿ, ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ; ಅತ್ಯಂತ ಶಿಥಿಲವಾದ ಹಾಗು ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ತಿಗೆ 1೦೦ ಕೋಟಿ ಪ್ರಾಥಮಿಕ ಹಾಗು ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನವನ್ನು 20000 ನ್ನು 45000 ಕ್ಕೆ ಏರಿಸಲು 153 ಕೋಟಿ ; ವಾರಕ್ಕೆ ಎರಡು ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಠಿಕತೆಯನ್ನು ಸುಧಾರಿಸಲು 280 ಕೋಟಿ ;ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿಗೊಳಿಸಲು 80 ಕೋಟಿ; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗು ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ; ಸಾಟ್ಸ್‌ (Students Achievement Tracking System) ನ್ನು 2.0 ಗೆ ಮೇಲ್ದರ್ಜೆಗೇರಿಸಲು ಕ್ರಮ ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗು ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ಹಣವನ್ನು ಒದಗಿಸಿರುವುದು ಮುಖ್ಯ ಮಂತ್ರಿಗಳಿಗೆ ಹಾಗು ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37587 ಕೋಟಿಯನ್ನು (ಒಟ್ಟು ಆಯವ್ಯಯದಲ್ಲಿ ಶೇಕಡ.11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ , ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ ನಾಲ್ಕು ದಶಕಗಳಿಂದ ಹೋರಾಡುತ್ತಿರುವ ನನ್ನಂಥವರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದೆ ಎಂದಿದ್ದಾರೆ.

ಇದನ್ನೂ ಓದಿ; ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...