Homeಮುಖಪುಟಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

ಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವ ಸರಣಿ ಸಮಾಲೋಚನೆಗಳ ಭಾಗವಾಗಿ ಹಣಕಾಸು ವಲಯ ಮತ್ತು ಬಂಡವಾಳ ಮಾರುಕಟ್ಟೆಗಳ ಮಧ್ಯಸ್ಥಗಾರರನ್ನು ಗುರುವಾರ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಬಜೆಟ್ 2025 ಹಿನ್ನೆಲೆ

ಸಭೆಯಲ್ಲಿ ಹಣಕಾಸು ಕಾರ್ಯದರ್ಶಿ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ, ಮತ್ತು ಆರ್ಥಿಕ ವ್ಯವಹಾರಗಳ ಇಲಾಖೆ – ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಗಳು ಮತ್ತು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರು ಭಾಗವಹಿಸಿದ್ದರು ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಹೇಳಿದೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆಸಿದ ಬಜೆಟ್ ಪೂರ್ವ ಸರಣಿ ಸಭೆಗಳಲ್ಲಿ ಏಳನೇ ಸಭೆ ಇದಾಗಿದೆ ಎಂದು ವರದಿ ಉಲ್ಲೇಖಿಸಿದೆ. ಹಣಕಾಸು ಸಚಿವಾಲಯವು ತಜ್ಞರು, ಉದ್ಯಮದ ಮುಖಂಡರು, ಅರ್ಥಶಾಸ್ತ್ರಜ್ಞರು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ವಾರ್ಷಿಕವಾಗಿ ಹಲವಾರು ಬಜೆಟ್ ಪೂರ್ವ ಸಮಾಲೋಚನಾ ಸಭೆಗಳನ್ನು ನಡೆಸುತ್ತದೆ. ಮುಂದಿನ ಹಣಕಾಸು ವರ್ಷಕ್ಕೆ ವಾರ್ಷಿಕ ಬಜೆಟ್ ಸಿದ್ಧಪಡಿಸುವ ಔಪಚಾರಿಕ ಕಸರತ್ತು ಈಗಾಗಲೇ ಆರಂಭವಾಗಿದೆ. ಬಜೆಟ್ 2025 ಹಿನ್ನೆಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿರ್ಮಲಾ ಸೀತಾರಾಮನ್ ಇದುವರೆಗೆ ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ)ಗಳು, ರೈತರ ಸಂಘಗಳು ಮತ್ತು ಅರ್ಥಶಾಸ್ತ್ರಜ್ಞರು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ನೀತಿ ಆಯೋಗ ಆವರಣದಲ್ಲಿ ಕೇಂದ್ರ ಬಜೆಟ್ 2025-26 ರ ತಯಾರಿಯಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ಚಿಂತಕರ ಗುಂಪಿನೊಂದಿಗೆ ಸಂವಾದ ನಡೆಸಿದ್ದರು. ವರದಿಯಂತೆ 2025-26ರ ಬಜೆಟ್ ಅನ್ನು ಫೆಬ್ರವರಿ 1, 2025 ರಂದು ಮಂಡಿಸಲಾಗುತ್ತದೆ.

2025-26ರ ಬಜೆಟ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎಂಟನೇ ಬಜೆಟ್ ಆಗಲಿದ್ದು, ಮೋದಿ 3.0 ಸರ್ಕಾರದ ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಮುಂದಿನ ನಡೆಗಳ ಬಗ್ಗೆ ಎಲ್ಲರ ಕಣ್ಣುಗಳು ನಟ್ಟಿವೆ. ಅಲ್ಲದೆ, ದುರ್ಬಲ ಜಿಡಿಪಿ ಬೆಳವಣಿಗೆ ಮತ್ತು ಸಂಕಷ್ಟದ ಆರ್ಥಿಕತೆಯ ನಡುವೆ ಈ ಬಜೆಟ್‌ಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ 2024-25 ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯ ವಾಸ್ತವ ಬೆಳವಣಿಗೆ 5.4% ಆಗಿದೆ.  ರಿಸರ್ವ್ ಬ್ಯಾಂಕ್ ತನ್ನ ಇತ್ತೀಚಿನ ಹಣಕಾಸು ನೀತಿಯಲ್ಲಿ 2024-25 ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು 7.2% ರಿಂದ 6.6% ಕ್ಕೆ ಕಡಿತಗೊಳಿಸಿದೆ.

ಇದನ್ನೂ ಓದಿ: ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...