Homeಮುಖಪುಟಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

ಬಜೆಟ್ 2025 ಹಿನ್ನೆಲೆ | ಸರಣಿ ಸಭೆಗಳನ್ನು ನಡೆಸುತ್ತಿರುವ ವಿತ್ತಸಚಿವೆ ನಿರ್ಮಲಾ ಸೀತಾರಾಮನ್!

- Advertisement -
- Advertisement -

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪೂರ್ವ ಸರಣಿ ಸಮಾಲೋಚನೆಗಳ ಭಾಗವಾಗಿ ಹಣಕಾಸು ವಲಯ ಮತ್ತು ಬಂಡವಾಳ ಮಾರುಕಟ್ಟೆಗಳ ಮಧ್ಯಸ್ಥಗಾರರನ್ನು ಗುರುವಾರ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿದೆ. ಬಜೆಟ್ 2025 ಹಿನ್ನೆಲೆ

ಸಭೆಯಲ್ಲಿ ಹಣಕಾಸು ಕಾರ್ಯದರ್ಶಿ, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ, ಮತ್ತು ಆರ್ಥಿಕ ವ್ಯವಹಾರಗಳ ಇಲಾಖೆ – ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಗಳು ಮತ್ತು ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರು ಭಾಗವಹಿಸಿದ್ದರು ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಹೇಳಿದೆ.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಡೆಸಿದ ಬಜೆಟ್ ಪೂರ್ವ ಸರಣಿ ಸಭೆಗಳಲ್ಲಿ ಏಳನೇ ಸಭೆ ಇದಾಗಿದೆ ಎಂದು ವರದಿ ಉಲ್ಲೇಖಿಸಿದೆ. ಹಣಕಾಸು ಸಚಿವಾಲಯವು ತಜ್ಞರು, ಉದ್ಯಮದ ಮುಖಂಡರು, ಅರ್ಥಶಾಸ್ತ್ರಜ್ಞರು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ವಾರ್ಷಿಕವಾಗಿ ಹಲವಾರು ಬಜೆಟ್ ಪೂರ್ವ ಸಮಾಲೋಚನಾ ಸಭೆಗಳನ್ನು ನಡೆಸುತ್ತದೆ. ಮುಂದಿನ ಹಣಕಾಸು ವರ್ಷಕ್ಕೆ ವಾರ್ಷಿಕ ಬಜೆಟ್ ಸಿದ್ಧಪಡಿಸುವ ಔಪಚಾರಿಕ ಕಸರತ್ತು ಈಗಾಗಲೇ ಆರಂಭವಾಗಿದೆ. ಬಜೆಟ್ 2025 ಹಿನ್ನೆಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಿರ್ಮಲಾ ಸೀತಾರಾಮನ್ ಇದುವರೆಗೆ ಅತೀ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ)ಗಳು, ರೈತರ ಸಂಘಗಳು ಮತ್ತು ಅರ್ಥಶಾಸ್ತ್ರಜ್ಞರು ಸೇರಿದಂತೆ ವಿವಿಧ ಪಾಲುದಾರರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಇಕನಾಮಿಕ್ಸ್‌ ಟೈಮ್ಸ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವಾರ ನೀತಿ ಆಯೋಗ ಆವರಣದಲ್ಲಿ ಕೇಂದ್ರ ಬಜೆಟ್ 2025-26 ರ ತಯಾರಿಯಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞರು ಮತ್ತು ಚಿಂತಕರ ಗುಂಪಿನೊಂದಿಗೆ ಸಂವಾದ ನಡೆಸಿದ್ದರು. ವರದಿಯಂತೆ 2025-26ರ ಬಜೆಟ್ ಅನ್ನು ಫೆಬ್ರವರಿ 1, 2025 ರಂದು ಮಂಡಿಸಲಾಗುತ್ತದೆ.

2025-26ರ ಬಜೆಟ್ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎಂಟನೇ ಬಜೆಟ್ ಆಗಲಿದ್ದು, ಮೋದಿ 3.0 ಸರ್ಕಾರದ ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಮುಂದಿನ ನಡೆಗಳ ಬಗ್ಗೆ ಎಲ್ಲರ ಕಣ್ಣುಗಳು ನಟ್ಟಿವೆ. ಅಲ್ಲದೆ, ದುರ್ಬಲ ಜಿಡಿಪಿ ಬೆಳವಣಿಗೆ ಮತ್ತು ಸಂಕಷ್ಟದ ಆರ್ಥಿಕತೆಯ ನಡುವೆ ಈ ಬಜೆಟ್‌ಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ 2024-25 ರ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯ ವಾಸ್ತವ ಬೆಳವಣಿಗೆ 5.4% ಆಗಿದೆ.  ರಿಸರ್ವ್ ಬ್ಯಾಂಕ್ ತನ್ನ ಇತ್ತೀಚಿನ ಹಣಕಾಸು ನೀತಿಯಲ್ಲಿ 2024-25 ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು 7.2% ರಿಂದ 6.6% ಕ್ಕೆ ಕಡಿತಗೊಳಿಸಿದೆ.

ಇದನ್ನೂ ಓದಿ: ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ಮನು ಭಾಕರ್-ಗುಕೇಶ್ ಸೇರಿದಂತೆ ನಾಲ್ವರಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ; ಜನವರಿ 17 ರಂದು ಪ್ರಶಸ್ತಿ ಪ್ರದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....