Homeಮುಖಪುಟಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಕನಿಷ್ಠ ನೂರು ದಿನ ಉದ್ಯೋಗ ನೀಡಲು 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ಟಿನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ...

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು. ಬಲು ಬಲಾಢ್ಯ ಶಾಸಕರ ಮನೆತನಗಳೇ ಇರಬಹುದು ಈ ತಾಲೂಕಿನಿಂದ. ಆದರೆ ಶ್ರೀಮಂತರ ಥಳಕು ಬೆಳಕಿನ ಬುಡ ಕಗ್ಗತ್ತಲು. ಒಂದೊಂದು ಹಳ್ಳಿಯೂ ಬಡತನವನ್ನೇ ಹಾಸಿ ಹೊದ್ದುಕೊಂಡು ಮಲಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಹೆಸರನ್ನು ಈಗೀಗ ಕೇಳುತ್ತಿರುವ ಹಳ್ಳಿಗಳಿವೆ ಇಲ್ಲಿ. ಒಮ್ಮೆ ಕೆಲಸ ಪಡೆದುಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತಿಯವರ ಹುಬ್ಬು ಮೇಲೇರುತ್ತದೆ. ‘ಎಲ್ಲಿಂದ ಕೊಡ್ಲವ್ವಾ ಕೆಲಸಾ? ನೀವೇ ಹುಡ್ಕೊಂಡು ರ‍್ರಿ!’ ತಿಂಗಳುಗಟ್ಟಲೆ ಕಾಯಿಸಿ ಕಡೆಯಲ್ಲಿ ಭಿಕ್ಷೆ ಎಂಬಂತೆ ಒಂದು ಎನ್ನೆಮ್ಮಾರ್ ಕೊಡುತ್ತಾರೆ. ಅದು ಮುಗಿದ ಬಳಿಕ ಮತ್ತೆ ತಿಂಗಳಾನುಗಟ್ಟಲೆ ಕಾಯಬೇಕು. ಎಲ್ಲಿಯದು ಬಿಡು! ಎನ್ನುತ್ತ ಹತ್ತಾರು ಹಳ್ಳಿಗಳ ಜನರಾಗಲೇ ಕೆಲಸ ಹುಡುಕಿ ಇಟ್ಟಿಗೆ ಭಟ್ಟಿಗಳಿಗೆ ಹೋಗಿಬಿಟ್ಟಿದ್ದಾರೆ.

ಆದರೂ ಕೋವಿಡ್‌ನಂತಹ ಮಹಾಮಾರಿ ಎರಗಿ ವಲಸೆ ಹೋದವರು ಊರಿಗೆ ವಾಪಸ್ಸಾದಾಗ ಹಿಂದೆ ಸಂಕಟಮಯ ಸಂದರ್ಭದಲ್ಲಿ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೊಂದೇ ಅವರನ್ನು ನೆಲಕಚ್ಚದಂತೆ ಎತ್ತಿ ಹಿಡಿದಿತ್ತು. 2020-21ರಲ್ಲಿ ಉದ್ಯೋಗ ಖಾತರಿಯ ಹಾಜರಾತಿಯ ಸಂಖ್ಯೆಯು ಹಿಂದಿನ ವರ್ಷದ್ದಕ್ಕಿಂತ ಒಮ್ಮೆಗೇ 46% ಹೆಚ್ಚಾಯಿತು. ಮರುವರ್ಷ 2021ರ ಡಿಸೆಂಬರ್ ಹೊತ್ತಿಗಾಗಲೇ ಎರಡು ವರ್ಷ ಹಿಂದಿನ ಪೂರ್ತಿ ಹಾಜರಿಗಿಂತಲೂ 10% ಹೆಚ್ಚಾಗಿದೆ. ಕೆಲಸ ಕೇಳಿದ ಜನರ ಸಂಖ್ಯೆಯು ಇದಕ್ಕಿಂತಲೂ ಹೆಚ್ಚಿನದಿರುತ್ತದೆ.

ಈ ಚಿತ್ರ ಬಿಚ್ಚಿಡುವುದೇನನ್ನು? ಗ್ರಾಮೀಣ ಸಂಕಟವನ್ನು ಕೊನೆಗಾಣಿಸಲು ಒಂದು ಕಾನೂನಿನ ಮೂಲಕ ಸರಕಾರವು ಗ್ರಾಮೀಣ ಜನರಿಗೆ ಮಾಡಿದ ವಾಗ್ದಾನವಾಗಿತ್ತು. ಉದ್ಯೋಗಕ್ಕಾಗಿ ಜನರು ಬೇಡಿಕೆ ಇಟ್ಟಾಗ ಕೆಲಸ ಕೊಡುತ್ತೇನೆಂದು ಮಾಡಿದ ವಾಗ್ದಾನವು ಅತಿ ಕಡಿಮೆ ಬಜೆಟ್ ಮಾಡುವುದರ ಮೂಲಕ `ನಾವು ಕೆಲಸ ಕೊಟ್ಟಾಗ ಮಾಡಿ’ ಎಂಬ ಉದ್ಧಟ ನೀತಿಯಾಗಿ ಪರಿವರ್ತನೆಗೊಂಡಿದೆ. ಊರು ತೊರೆದು ವಲಸೆ ಹೋಗಿಬಿಡುತ್ತಿದ್ದ ಜನರನ್ನು ತಡೆದು ನಿಲ್ಲಿಸಿತು ಉದ್ಯೋಗ ಖಾತರಿ. ಈಗ ಮತ್ತೆ ಅದು ‘ಎಲ್ಲಿಗೆ ಹೋಗ್ತೀರೋ ಹೋಗಿ’ ಎನ್ನುತ್ತಿದೆ. ಎಂಥಾ ಅವಸ್ಥೆ!

2020-21ರಲ್ಲಿ ಉದ್ಯೋಗ ಖಾತರಿಗೆ ಇಟ್ಟಿದ್ದ ಹಣವು ಸಾಕಾಗದೇ ಮತ್ತೆ 40,000 ಕೋಟಿಯ ಹೆಚ್ಚುವರಿ ಹಣ ಹಾಕಿದಾಗಲೂ ವರ್ಷ ಮುಗಿಯುವ ಹೊತ್ತಿಗೆ ಜನರ ಕೂಲಿಬಾಕಿಯು 17,000 ಕೋಟಿ ಇತ್ತು. ಆ ವರ್ಷ ಇಟ್ಟ ಬಜೆಟ್ 82,000 ಕೋಟಿಯಾಗಿತ್ತು. ಉದ್ಯೋಗ ಖಾತರಿಯ ಸರಿಯಾದ ಜಾರಿಗಾಗಿ ಒತ್ತಾಯಿಸುವ ಜನಸಂಘಟನೆಗಳು ಕಲೆತು ಲೆಕ್ಕ ಹಾಕಿ ಮರುವರ್ಷ 1.15 ಲಕ್ಷ ಕೋಟಿ ಹಣ ಇಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದವು. ಆದರೆ ಸರಕಾರ ಇಟ್ಟಿದ್ದು ಬರಿಯ 73,000 ಕೋಟಿ. ಅದರಲ್ಲಿ 26%ನಷ್ಟು ಹಣವು ಹಿಂದಿನ ವರ್ಷದ ಬಾಕಿಗೇ ಹೋಯಿತು. ಈ ವರ್ಷದ ಅರ್ಧಭಾಗ ಕಳೆಯುವುದರೊಳಗೆ ಅನೇಕ ರಾಜ್ಯಗಳು ಉದ್ಯೋಗ ಖಾತರಿಗೆ ಹಣವಿಲ್ಲದೇ ನಮ್ಮ ಹುಕ್ಕೇರಿಯ ಪಂಚಾಯತಿಗಳಲ್ಲಿ ಮಾಡಿದಂತೆ ಕೆಲಸ ಕೊಡಲಾರದಾದವು. ಡಿಸೆಂಬರ್‌ಲ್ಲಿ ಸರಕಾರವು ಮತ್ತೆ 25000 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತಾದರೂ ಇನ್ನೂವರೆಗೆ ಕೇಂದ್ರ ಬೊಕ್ಕಸದಿಂದ ಹೊರಬಿದ್ದಿದ್ದು 7114 ಕೋಟಿ ರೂ. ಮಾತ್ರ. ಇಲ್ಲಿಯವರೆಗೆ ಕೇವಲ 5% ಕುಟುಂಬಗಳು 100 ದಿನಗಳನ್ನು ಮುಗಿಸಲು ಸಾಧ್ಯವಾಗಿದೆ.

ಕಳೆದ ಐದು ವರ್ಷಗಳಿಂದ ಬಜೆಟ್ ಮತ್ತು ಹಣ ಸಂದಾಯವಾಗುವ ರೀತಿಯು ಹೀಗೆಯೇ ಸಾಗಿದೆ. ಸುಮಾರು 20%ನಷ್ಟು ಬಜೆಟ್ಟಿನ ಹಣ ಕಳೆದ ವರ್ಷದ ಬಾಕಿಯನ್ನು ತೀರಿಸಲಿಕ್ಕೇ ಹೋಗುತ್ತದೆ. ಈ ವರ್ಷವೂ ಕೂಡ. ಈಗಾಗಲೇ 12,414 ಕೋಟಿ ರೂ. ಬಾಕಿಯಿದ್ದು ವರ್ಷದ ಕೊನೆಯ ವೇಳೆಗೆ ಅದು 21,000 ಕೋಟಿ ಆಗಬಹುದು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪರಿಚ್ಛೇದ 2 ಅಧ್ಯಾಯದ ಪ್ರಕಾರ ಉದ್ಯೋಗ ಖಾತರಿಯ ಕೂಲಿಯು ಆಯಾ ರಾಜ್ಯದ ಕೃಷಿ ಕನಿಷ್ಟ ಕೂಲಿಗಿಂತಲೂ ಕಡಿಮೆ ಇರಬಾರದು. ಎಲ್ಲಾ ರಾಜ್ಯಗಳ ಕನಿಷ್ಟ ಕೃಷಿ ಕೂಲಿಯನ್ನು ನೋಡಲಾಗಿ ಮತ್ತು ಬಳಕೆಯಾಗುತ್ತಿರುವ ಉದ್ಯೋಗ ಚೀಟಿಗಳನ್ನು ಲೆಕ್ಕ ಹಾಕಲಾಗಿ ಕೇಂದ್ರ ಸರಕಾರವು ಸರಾಸರಿ 269 ರೂ. ಕನಿಷ್ಟ ಕೂಲಿಯನ್ನು ನಿಗದಿ ಮಾಡಬೇಕು.

ಸರಾಸರಿ ಕನಿಷ್ಟ 269 ರೂ. ಕೂಲಿಯನ್ನು ಕೊಡುವುದಾದರೂ ಕೇಂದ್ರ ಸರಕಾರವು ಕೆಲಸ ಕೇಳಿ ಬರುವಂಥ ಜಾಬ್ ಕಾರ್ಡುಗಳಿಗೆ 100 ದಿನಗಳ ಕೆಲಸವನ್ನು ಕೊಡಬೇಕೆಂದರೆ ಕನಿಷ್ಟ 2.64 ಲಕ್ಷ ಕೋಟಿ ಹಣವನ್ನು ಈ ವರ್ಷದ ಬಜೆಟ್ಟಿನಲ್ಲಿ ಉದ್ಯೋಗ ಖಾತರಿಗೆಂದು ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ. ಮುಂದಿನ ದಿನಗಳಲ್ಲಿ ಮತ್ತದೇ ಸಂಕಟಾವು ಪುನರಾವರ್ತನೆ ಆಗಲಿದೆ. ಜನರು ಉದ್ಯೋಗಕ್ಕೆ ಅರ್ಜಿ ಹಿಡಿದು ಪಂಚಾಯತಿಯ ಎದುರು ನಿಲ್ಲುವುದು. ಅವರು ಕೈಯಾಡಿಸುವುದು. ಇವರು ಕಾದು ಕಾದು ಸಾಕಾಗಿ ಮತ್ತೆ ಗುಳೇ ಹೋಗುವುದು.

ಜನರು ಊರು ಬಿಟ್ಟು ಗುಳೇ ಹೋಗುವುದೇ ಬೇಕಾಗಿದೆ ನಮ್ಮ ಆಳುವ ವರ್ಗಕ್ಕೆ. ಬೇಕಾದಷ್ಟು ಹಣವಿದೆ ರಸ್ತೆಗಳನ್ನು ಮಾಡುವುದಕ್ಕೆ. ಮೂಲ ಸೌಕರ್ಯದ ಹೆಸರಿನಲ್ಲಿ ಇಟ್ಟಿಗೆ ಬಟ್ಟಿಗಳಲ್ಲಿ ಜೀತಕ್ಕಿರುವಂತೆ ದುಡಿಯಲು, ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಲು, ರಸ್ತೆಗೆ ನಿಮ್ಮದೇ ಊರಿನ ಗುಡ್ಡ ಬೆಟ್ಟಗಳನ್ನು ಕಡಿದು ಮಣ್ಣು ಸುರಿಯಲು, ಸಿಮೆಂಟ್ ಕಲಸಿ ರಸ್ತೆಗೆ ಸುರಿಯಲು, ಮಾಡಿದ ಸಿಮೆಂಟ್ ರಸ್ತೆಗಳಿಗೆ ನಿಮ್ಮ ಕೆರೆ, ಹಳ್ಳಗಳಿಂದ ನೀರು ತಂದು ಸುರಿಯಲು. ಧೂಳು, ಸಿಮೆಂಟ್‌ಗಳಲ್ಲಿ ಮುಚ್ಚಿ ಹೋಗುವ ಅನಾಮಧೇಯರು ಬೇಕಾಗಿದ್ದಾರೆ.

ಶಾರದಾ ಗೋಪಾಲ

ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ; ಆಹಾರ ಆಹಾರವಾಗಿಯೇ ಇರಲಿ; ಅನವಶ್ಯಕ ಔಷಧವಾಗಿ ಬೇಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...