Homeಮುಖಪುಟಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಕನಿಷ್ಠ ನೂರು ದಿನ ಉದ್ಯೋಗ ನೀಡಲು 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ಟಿನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ...

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು. ಬಲು ಬಲಾಢ್ಯ ಶಾಸಕರ ಮನೆತನಗಳೇ ಇರಬಹುದು ಈ ತಾಲೂಕಿನಿಂದ. ಆದರೆ ಶ್ರೀಮಂತರ ಥಳಕು ಬೆಳಕಿನ ಬುಡ ಕಗ್ಗತ್ತಲು. ಒಂದೊಂದು ಹಳ್ಳಿಯೂ ಬಡತನವನ್ನೇ ಹಾಸಿ ಹೊದ್ದುಕೊಂಡು ಮಲಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಹೆಸರನ್ನು ಈಗೀಗ ಕೇಳುತ್ತಿರುವ ಹಳ್ಳಿಗಳಿವೆ ಇಲ್ಲಿ. ಒಮ್ಮೆ ಕೆಲಸ ಪಡೆದುಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತಿಯವರ ಹುಬ್ಬು ಮೇಲೇರುತ್ತದೆ. ‘ಎಲ್ಲಿಂದ ಕೊಡ್ಲವ್ವಾ ಕೆಲಸಾ? ನೀವೇ ಹುಡ್ಕೊಂಡು ರ‍್ರಿ!’ ತಿಂಗಳುಗಟ್ಟಲೆ ಕಾಯಿಸಿ ಕಡೆಯಲ್ಲಿ ಭಿಕ್ಷೆ ಎಂಬಂತೆ ಒಂದು ಎನ್ನೆಮ್ಮಾರ್ ಕೊಡುತ್ತಾರೆ. ಅದು ಮುಗಿದ ಬಳಿಕ ಮತ್ತೆ ತಿಂಗಳಾನುಗಟ್ಟಲೆ ಕಾಯಬೇಕು. ಎಲ್ಲಿಯದು ಬಿಡು! ಎನ್ನುತ್ತ ಹತ್ತಾರು ಹಳ್ಳಿಗಳ ಜನರಾಗಲೇ ಕೆಲಸ ಹುಡುಕಿ ಇಟ್ಟಿಗೆ ಭಟ್ಟಿಗಳಿಗೆ ಹೋಗಿಬಿಟ್ಟಿದ್ದಾರೆ.

ಆದರೂ ಕೋವಿಡ್‌ನಂತಹ ಮಹಾಮಾರಿ ಎರಗಿ ವಲಸೆ ಹೋದವರು ಊರಿಗೆ ವಾಪಸ್ಸಾದಾಗ ಹಿಂದೆ ಸಂಕಟಮಯ ಸಂದರ್ಭದಲ್ಲಿ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೊಂದೇ ಅವರನ್ನು ನೆಲಕಚ್ಚದಂತೆ ಎತ್ತಿ ಹಿಡಿದಿತ್ತು. 2020-21ರಲ್ಲಿ ಉದ್ಯೋಗ ಖಾತರಿಯ ಹಾಜರಾತಿಯ ಸಂಖ್ಯೆಯು ಹಿಂದಿನ ವರ್ಷದ್ದಕ್ಕಿಂತ ಒಮ್ಮೆಗೇ 46% ಹೆಚ್ಚಾಯಿತು. ಮರುವರ್ಷ 2021ರ ಡಿಸೆಂಬರ್ ಹೊತ್ತಿಗಾಗಲೇ ಎರಡು ವರ್ಷ ಹಿಂದಿನ ಪೂರ್ತಿ ಹಾಜರಿಗಿಂತಲೂ 10% ಹೆಚ್ಚಾಗಿದೆ. ಕೆಲಸ ಕೇಳಿದ ಜನರ ಸಂಖ್ಯೆಯು ಇದಕ್ಕಿಂತಲೂ ಹೆಚ್ಚಿನದಿರುತ್ತದೆ.

ಈ ಚಿತ್ರ ಬಿಚ್ಚಿಡುವುದೇನನ್ನು? ಗ್ರಾಮೀಣ ಸಂಕಟವನ್ನು ಕೊನೆಗಾಣಿಸಲು ಒಂದು ಕಾನೂನಿನ ಮೂಲಕ ಸರಕಾರವು ಗ್ರಾಮೀಣ ಜನರಿಗೆ ಮಾಡಿದ ವಾಗ್ದಾನವಾಗಿತ್ತು. ಉದ್ಯೋಗಕ್ಕಾಗಿ ಜನರು ಬೇಡಿಕೆ ಇಟ್ಟಾಗ ಕೆಲಸ ಕೊಡುತ್ತೇನೆಂದು ಮಾಡಿದ ವಾಗ್ದಾನವು ಅತಿ ಕಡಿಮೆ ಬಜೆಟ್ ಮಾಡುವುದರ ಮೂಲಕ `ನಾವು ಕೆಲಸ ಕೊಟ್ಟಾಗ ಮಾಡಿ’ ಎಂಬ ಉದ್ಧಟ ನೀತಿಯಾಗಿ ಪರಿವರ್ತನೆಗೊಂಡಿದೆ. ಊರು ತೊರೆದು ವಲಸೆ ಹೋಗಿಬಿಡುತ್ತಿದ್ದ ಜನರನ್ನು ತಡೆದು ನಿಲ್ಲಿಸಿತು ಉದ್ಯೋಗ ಖಾತರಿ. ಈಗ ಮತ್ತೆ ಅದು ‘ಎಲ್ಲಿಗೆ ಹೋಗ್ತೀರೋ ಹೋಗಿ’ ಎನ್ನುತ್ತಿದೆ. ಎಂಥಾ ಅವಸ್ಥೆ!

2020-21ರಲ್ಲಿ ಉದ್ಯೋಗ ಖಾತರಿಗೆ ಇಟ್ಟಿದ್ದ ಹಣವು ಸಾಕಾಗದೇ ಮತ್ತೆ 40,000 ಕೋಟಿಯ ಹೆಚ್ಚುವರಿ ಹಣ ಹಾಕಿದಾಗಲೂ ವರ್ಷ ಮುಗಿಯುವ ಹೊತ್ತಿಗೆ ಜನರ ಕೂಲಿಬಾಕಿಯು 17,000 ಕೋಟಿ ಇತ್ತು. ಆ ವರ್ಷ ಇಟ್ಟ ಬಜೆಟ್ 82,000 ಕೋಟಿಯಾಗಿತ್ತು. ಉದ್ಯೋಗ ಖಾತರಿಯ ಸರಿಯಾದ ಜಾರಿಗಾಗಿ ಒತ್ತಾಯಿಸುವ ಜನಸಂಘಟನೆಗಳು ಕಲೆತು ಲೆಕ್ಕ ಹಾಕಿ ಮರುವರ್ಷ 1.15 ಲಕ್ಷ ಕೋಟಿ ಹಣ ಇಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದವು. ಆದರೆ ಸರಕಾರ ಇಟ್ಟಿದ್ದು ಬರಿಯ 73,000 ಕೋಟಿ. ಅದರಲ್ಲಿ 26%ನಷ್ಟು ಹಣವು ಹಿಂದಿನ ವರ್ಷದ ಬಾಕಿಗೇ ಹೋಯಿತು. ಈ ವರ್ಷದ ಅರ್ಧಭಾಗ ಕಳೆಯುವುದರೊಳಗೆ ಅನೇಕ ರಾಜ್ಯಗಳು ಉದ್ಯೋಗ ಖಾತರಿಗೆ ಹಣವಿಲ್ಲದೇ ನಮ್ಮ ಹುಕ್ಕೇರಿಯ ಪಂಚಾಯತಿಗಳಲ್ಲಿ ಮಾಡಿದಂತೆ ಕೆಲಸ ಕೊಡಲಾರದಾದವು. ಡಿಸೆಂಬರ್‌ಲ್ಲಿ ಸರಕಾರವು ಮತ್ತೆ 25000 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತಾದರೂ ಇನ್ನೂವರೆಗೆ ಕೇಂದ್ರ ಬೊಕ್ಕಸದಿಂದ ಹೊರಬಿದ್ದಿದ್ದು 7114 ಕೋಟಿ ರೂ. ಮಾತ್ರ. ಇಲ್ಲಿಯವರೆಗೆ ಕೇವಲ 5% ಕುಟುಂಬಗಳು 100 ದಿನಗಳನ್ನು ಮುಗಿಸಲು ಸಾಧ್ಯವಾಗಿದೆ.

ಕಳೆದ ಐದು ವರ್ಷಗಳಿಂದ ಬಜೆಟ್ ಮತ್ತು ಹಣ ಸಂದಾಯವಾಗುವ ರೀತಿಯು ಹೀಗೆಯೇ ಸಾಗಿದೆ. ಸುಮಾರು 20%ನಷ್ಟು ಬಜೆಟ್ಟಿನ ಹಣ ಕಳೆದ ವರ್ಷದ ಬಾಕಿಯನ್ನು ತೀರಿಸಲಿಕ್ಕೇ ಹೋಗುತ್ತದೆ. ಈ ವರ್ಷವೂ ಕೂಡ. ಈಗಾಗಲೇ 12,414 ಕೋಟಿ ರೂ. ಬಾಕಿಯಿದ್ದು ವರ್ಷದ ಕೊನೆಯ ವೇಳೆಗೆ ಅದು 21,000 ಕೋಟಿ ಆಗಬಹುದು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪರಿಚ್ಛೇದ 2 ಅಧ್ಯಾಯದ ಪ್ರಕಾರ ಉದ್ಯೋಗ ಖಾತರಿಯ ಕೂಲಿಯು ಆಯಾ ರಾಜ್ಯದ ಕೃಷಿ ಕನಿಷ್ಟ ಕೂಲಿಗಿಂತಲೂ ಕಡಿಮೆ ಇರಬಾರದು. ಎಲ್ಲಾ ರಾಜ್ಯಗಳ ಕನಿಷ್ಟ ಕೃಷಿ ಕೂಲಿಯನ್ನು ನೋಡಲಾಗಿ ಮತ್ತು ಬಳಕೆಯಾಗುತ್ತಿರುವ ಉದ್ಯೋಗ ಚೀಟಿಗಳನ್ನು ಲೆಕ್ಕ ಹಾಕಲಾಗಿ ಕೇಂದ್ರ ಸರಕಾರವು ಸರಾಸರಿ 269 ರೂ. ಕನಿಷ್ಟ ಕೂಲಿಯನ್ನು ನಿಗದಿ ಮಾಡಬೇಕು.

ಸರಾಸರಿ ಕನಿಷ್ಟ 269 ರೂ. ಕೂಲಿಯನ್ನು ಕೊಡುವುದಾದರೂ ಕೇಂದ್ರ ಸರಕಾರವು ಕೆಲಸ ಕೇಳಿ ಬರುವಂಥ ಜಾಬ್ ಕಾರ್ಡುಗಳಿಗೆ 100 ದಿನಗಳ ಕೆಲಸವನ್ನು ಕೊಡಬೇಕೆಂದರೆ ಕನಿಷ್ಟ 2.64 ಲಕ್ಷ ಕೋಟಿ ಹಣವನ್ನು ಈ ವರ್ಷದ ಬಜೆಟ್ಟಿನಲ್ಲಿ ಉದ್ಯೋಗ ಖಾತರಿಗೆಂದು ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ. ಮುಂದಿನ ದಿನಗಳಲ್ಲಿ ಮತ್ತದೇ ಸಂಕಟಾವು ಪುನರಾವರ್ತನೆ ಆಗಲಿದೆ. ಜನರು ಉದ್ಯೋಗಕ್ಕೆ ಅರ್ಜಿ ಹಿಡಿದು ಪಂಚಾಯತಿಯ ಎದುರು ನಿಲ್ಲುವುದು. ಅವರು ಕೈಯಾಡಿಸುವುದು. ಇವರು ಕಾದು ಕಾದು ಸಾಕಾಗಿ ಮತ್ತೆ ಗುಳೇ ಹೋಗುವುದು.

ಜನರು ಊರು ಬಿಟ್ಟು ಗುಳೇ ಹೋಗುವುದೇ ಬೇಕಾಗಿದೆ ನಮ್ಮ ಆಳುವ ವರ್ಗಕ್ಕೆ. ಬೇಕಾದಷ್ಟು ಹಣವಿದೆ ರಸ್ತೆಗಳನ್ನು ಮಾಡುವುದಕ್ಕೆ. ಮೂಲ ಸೌಕರ್ಯದ ಹೆಸರಿನಲ್ಲಿ ಇಟ್ಟಿಗೆ ಬಟ್ಟಿಗಳಲ್ಲಿ ಜೀತಕ್ಕಿರುವಂತೆ ದುಡಿಯಲು, ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಲು, ರಸ್ತೆಗೆ ನಿಮ್ಮದೇ ಊರಿನ ಗುಡ್ಡ ಬೆಟ್ಟಗಳನ್ನು ಕಡಿದು ಮಣ್ಣು ಸುರಿಯಲು, ಸಿಮೆಂಟ್ ಕಲಸಿ ರಸ್ತೆಗೆ ಸುರಿಯಲು, ಮಾಡಿದ ಸಿಮೆಂಟ್ ರಸ್ತೆಗಳಿಗೆ ನಿಮ್ಮ ಕೆರೆ, ಹಳ್ಳಗಳಿಂದ ನೀರು ತಂದು ಸುರಿಯಲು. ಧೂಳು, ಸಿಮೆಂಟ್‌ಗಳಲ್ಲಿ ಮುಚ್ಚಿ ಹೋಗುವ ಅನಾಮಧೇಯರು ಬೇಕಾಗಿದ್ದಾರೆ.

ಶಾರದಾ ಗೋಪಾಲ

ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ; ಆಹಾರ ಆಹಾರವಾಗಿಯೇ ಇರಲಿ; ಅನವಶ್ಯಕ ಔಷಧವಾಗಿ ಬೇಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...