Homeಮುಖಪುಟಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಬಜೆಟ್‌ನಲ್ಲಿ ನರೇಗಾ ಯೋಜನೆಗೆ ನಿರಂತರ ಅನುದಾನ ಕಡಿತ: ಜನರ ಗುಳೇ ಹೆಚ್ಚಿಸುವ ಹುನ್ನಾರ

ಕನಿಷ್ಠ ನೂರು ದಿನ ಉದ್ಯೋಗ ನೀಡಲು 2.64 ಲಕ್ಷ ಕೋಟಿ ಹಣ ಈ ವರ್ಷದ ಬಜೆಟ್ಟಿನಲ್ಲಿ ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ...

- Advertisement -
- Advertisement -

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು. ಬಲು ಬಲಾಢ್ಯ ಶಾಸಕರ ಮನೆತನಗಳೇ ಇರಬಹುದು ಈ ತಾಲೂಕಿನಿಂದ. ಆದರೆ ಶ್ರೀಮಂತರ ಥಳಕು ಬೆಳಕಿನ ಬುಡ ಕಗ್ಗತ್ತಲು. ಒಂದೊಂದು ಹಳ್ಳಿಯೂ ಬಡತನವನ್ನೇ ಹಾಸಿ ಹೊದ್ದುಕೊಂಡು ಮಲಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಹೆಸರನ್ನು ಈಗೀಗ ಕೇಳುತ್ತಿರುವ ಹಳ್ಳಿಗಳಿವೆ ಇಲ್ಲಿ. ಒಮ್ಮೆ ಕೆಲಸ ಪಡೆದುಕೊಂಡವರು ಮತ್ತೊಮ್ಮೆ ಅರ್ಜಿ ಕೊಟ್ಟರೆ ಪಂಚಾಯತಿಯವರ ಹುಬ್ಬು ಮೇಲೇರುತ್ತದೆ. ‘ಎಲ್ಲಿಂದ ಕೊಡ್ಲವ್ವಾ ಕೆಲಸಾ? ನೀವೇ ಹುಡ್ಕೊಂಡು ರ‍್ರಿ!’ ತಿಂಗಳುಗಟ್ಟಲೆ ಕಾಯಿಸಿ ಕಡೆಯಲ್ಲಿ ಭಿಕ್ಷೆ ಎಂಬಂತೆ ಒಂದು ಎನ್ನೆಮ್ಮಾರ್ ಕೊಡುತ್ತಾರೆ. ಅದು ಮುಗಿದ ಬಳಿಕ ಮತ್ತೆ ತಿಂಗಳಾನುಗಟ್ಟಲೆ ಕಾಯಬೇಕು. ಎಲ್ಲಿಯದು ಬಿಡು! ಎನ್ನುತ್ತ ಹತ್ತಾರು ಹಳ್ಳಿಗಳ ಜನರಾಗಲೇ ಕೆಲಸ ಹುಡುಕಿ ಇಟ್ಟಿಗೆ ಭಟ್ಟಿಗಳಿಗೆ ಹೋಗಿಬಿಟ್ಟಿದ್ದಾರೆ.

ಆದರೂ ಕೋವಿಡ್‌ನಂತಹ ಮಹಾಮಾರಿ ಎರಗಿ ವಲಸೆ ಹೋದವರು ಊರಿಗೆ ವಾಪಸ್ಸಾದಾಗ ಹಿಂದೆ ಸಂಕಟಮಯ ಸಂದರ್ಭದಲ್ಲಿ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತರಿಯೊಂದೇ ಅವರನ್ನು ನೆಲಕಚ್ಚದಂತೆ ಎತ್ತಿ ಹಿಡಿದಿತ್ತು. 2020-21ರಲ್ಲಿ ಉದ್ಯೋಗ ಖಾತರಿಯ ಹಾಜರಾತಿಯ ಸಂಖ್ಯೆಯು ಹಿಂದಿನ ವರ್ಷದ್ದಕ್ಕಿಂತ ಒಮ್ಮೆಗೇ 46% ಹೆಚ್ಚಾಯಿತು. ಮರುವರ್ಷ 2021ರ ಡಿಸೆಂಬರ್ ಹೊತ್ತಿಗಾಗಲೇ ಎರಡು ವರ್ಷ ಹಿಂದಿನ ಪೂರ್ತಿ ಹಾಜರಿಗಿಂತಲೂ 10% ಹೆಚ್ಚಾಗಿದೆ. ಕೆಲಸ ಕೇಳಿದ ಜನರ ಸಂಖ್ಯೆಯು ಇದಕ್ಕಿಂತಲೂ ಹೆಚ್ಚಿನದಿರುತ್ತದೆ.

ಈ ಚಿತ್ರ ಬಿಚ್ಚಿಡುವುದೇನನ್ನು? ಗ್ರಾಮೀಣ ಸಂಕಟವನ್ನು ಕೊನೆಗಾಣಿಸಲು ಒಂದು ಕಾನೂನಿನ ಮೂಲಕ ಸರಕಾರವು ಗ್ರಾಮೀಣ ಜನರಿಗೆ ಮಾಡಿದ ವಾಗ್ದಾನವಾಗಿತ್ತು. ಉದ್ಯೋಗಕ್ಕಾಗಿ ಜನರು ಬೇಡಿಕೆ ಇಟ್ಟಾಗ ಕೆಲಸ ಕೊಡುತ್ತೇನೆಂದು ಮಾಡಿದ ವಾಗ್ದಾನವು ಅತಿ ಕಡಿಮೆ ಬಜೆಟ್ ಮಾಡುವುದರ ಮೂಲಕ `ನಾವು ಕೆಲಸ ಕೊಟ್ಟಾಗ ಮಾಡಿ’ ಎಂಬ ಉದ್ಧಟ ನೀತಿಯಾಗಿ ಪರಿವರ್ತನೆಗೊಂಡಿದೆ. ಊರು ತೊರೆದು ವಲಸೆ ಹೋಗಿಬಿಡುತ್ತಿದ್ದ ಜನರನ್ನು ತಡೆದು ನಿಲ್ಲಿಸಿತು ಉದ್ಯೋಗ ಖಾತರಿ. ಈಗ ಮತ್ತೆ ಅದು ‘ಎಲ್ಲಿಗೆ ಹೋಗ್ತೀರೋ ಹೋಗಿ’ ಎನ್ನುತ್ತಿದೆ. ಎಂಥಾ ಅವಸ್ಥೆ!

2020-21ರಲ್ಲಿ ಉದ್ಯೋಗ ಖಾತರಿಗೆ ಇಟ್ಟಿದ್ದ ಹಣವು ಸಾಕಾಗದೇ ಮತ್ತೆ 40,000 ಕೋಟಿಯ ಹೆಚ್ಚುವರಿ ಹಣ ಹಾಕಿದಾಗಲೂ ವರ್ಷ ಮುಗಿಯುವ ಹೊತ್ತಿಗೆ ಜನರ ಕೂಲಿಬಾಕಿಯು 17,000 ಕೋಟಿ ಇತ್ತು. ಆ ವರ್ಷ ಇಟ್ಟ ಬಜೆಟ್ 82,000 ಕೋಟಿಯಾಗಿತ್ತು. ಉದ್ಯೋಗ ಖಾತರಿಯ ಸರಿಯಾದ ಜಾರಿಗಾಗಿ ಒತ್ತಾಯಿಸುವ ಜನಸಂಘಟನೆಗಳು ಕಲೆತು ಲೆಕ್ಕ ಹಾಕಿ ಮರುವರ್ಷ 1.15 ಲಕ್ಷ ಕೋಟಿ ಹಣ ಇಡಬೇಕೆಂದು ಸರಕಾರವನ್ನು ಒತ್ತಾಯಿಸಿದ್ದವು. ಆದರೆ ಸರಕಾರ ಇಟ್ಟಿದ್ದು ಬರಿಯ 73,000 ಕೋಟಿ. ಅದರಲ್ಲಿ 26%ನಷ್ಟು ಹಣವು ಹಿಂದಿನ ವರ್ಷದ ಬಾಕಿಗೇ ಹೋಯಿತು. ಈ ವರ್ಷದ ಅರ್ಧಭಾಗ ಕಳೆಯುವುದರೊಳಗೆ ಅನೇಕ ರಾಜ್ಯಗಳು ಉದ್ಯೋಗ ಖಾತರಿಗೆ ಹಣವಿಲ್ಲದೇ ನಮ್ಮ ಹುಕ್ಕೇರಿಯ ಪಂಚಾಯತಿಗಳಲ್ಲಿ ಮಾಡಿದಂತೆ ಕೆಲಸ ಕೊಡಲಾರದಾದವು. ಡಿಸೆಂಬರ್‌ಲ್ಲಿ ಸರಕಾರವು ಮತ್ತೆ 25000 ಕೋಟಿ ಬಿಡುಗಡೆ ಮಾಡುವುದಾಗಿ ಹೇಳಿತಾದರೂ ಇನ್ನೂವರೆಗೆ ಕೇಂದ್ರ ಬೊಕ್ಕಸದಿಂದ ಹೊರಬಿದ್ದಿದ್ದು 7114 ಕೋಟಿ ರೂ. ಮಾತ್ರ. ಇಲ್ಲಿಯವರೆಗೆ ಕೇವಲ 5% ಕುಟುಂಬಗಳು 100 ದಿನಗಳನ್ನು ಮುಗಿಸಲು ಸಾಧ್ಯವಾಗಿದೆ.

ಕಳೆದ ಐದು ವರ್ಷಗಳಿಂದ ಬಜೆಟ್ ಮತ್ತು ಹಣ ಸಂದಾಯವಾಗುವ ರೀತಿಯು ಹೀಗೆಯೇ ಸಾಗಿದೆ. ಸುಮಾರು 20%ನಷ್ಟು ಬಜೆಟ್ಟಿನ ಹಣ ಕಳೆದ ವರ್ಷದ ಬಾಕಿಯನ್ನು ತೀರಿಸಲಿಕ್ಕೇ ಹೋಗುತ್ತದೆ. ಈ ವರ್ಷವೂ ಕೂಡ. ಈಗಾಗಲೇ 12,414 ಕೋಟಿ ರೂ. ಬಾಕಿಯಿದ್ದು ವರ್ಷದ ಕೊನೆಯ ವೇಳೆಗೆ ಅದು 21,000 ಕೋಟಿ ಆಗಬಹುದು.

ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಅಧಿನಿಯಮದ ಪರಿಚ್ಛೇದ 2 ಅಧ್ಯಾಯದ ಪ್ರಕಾರ ಉದ್ಯೋಗ ಖಾತರಿಯ ಕೂಲಿಯು ಆಯಾ ರಾಜ್ಯದ ಕೃಷಿ ಕನಿಷ್ಟ ಕೂಲಿಗಿಂತಲೂ ಕಡಿಮೆ ಇರಬಾರದು. ಎಲ್ಲಾ ರಾಜ್ಯಗಳ ಕನಿಷ್ಟ ಕೃಷಿ ಕೂಲಿಯನ್ನು ನೋಡಲಾಗಿ ಮತ್ತು ಬಳಕೆಯಾಗುತ್ತಿರುವ ಉದ್ಯೋಗ ಚೀಟಿಗಳನ್ನು ಲೆಕ್ಕ ಹಾಕಲಾಗಿ ಕೇಂದ್ರ ಸರಕಾರವು ಸರಾಸರಿ 269 ರೂ. ಕನಿಷ್ಟ ಕೂಲಿಯನ್ನು ನಿಗದಿ ಮಾಡಬೇಕು.

ಸರಾಸರಿ ಕನಿಷ್ಟ 269 ರೂ. ಕೂಲಿಯನ್ನು ಕೊಡುವುದಾದರೂ ಕೇಂದ್ರ ಸರಕಾರವು ಕೆಲಸ ಕೇಳಿ ಬರುವಂಥ ಜಾಬ್ ಕಾರ್ಡುಗಳಿಗೆ 100 ದಿನಗಳ ಕೆಲಸವನ್ನು ಕೊಡಬೇಕೆಂದರೆ ಕನಿಷ್ಟ 2.64 ಲಕ್ಷ ಕೋಟಿ ಹಣವನ್ನು ಈ ವರ್ಷದ ಬಜೆಟ್ಟಿನಲ್ಲಿ ಉದ್ಯೋಗ ಖಾತರಿಗೆಂದು ತೆಗೆದಿರಿಸಬೇಕಾಗಿತ್ತು. ಆದರೆ ನಮ್ಮ ಸರಕಾರ ಇಟ್ಟಿದ್ದು ಕೇವಲ 73,000 ಕೋಟಿ. ಮುಂದಿನ ದಿನಗಳಲ್ಲಿ ಮತ್ತದೇ ಸಂಕಟಾವು ಪುನರಾವರ್ತನೆ ಆಗಲಿದೆ. ಜನರು ಉದ್ಯೋಗಕ್ಕೆ ಅರ್ಜಿ ಹಿಡಿದು ಪಂಚಾಯತಿಯ ಎದುರು ನಿಲ್ಲುವುದು. ಅವರು ಕೈಯಾಡಿಸುವುದು. ಇವರು ಕಾದು ಕಾದು ಸಾಕಾಗಿ ಮತ್ತೆ ಗುಳೇ ಹೋಗುವುದು.

ಜನರು ಊರು ಬಿಟ್ಟು ಗುಳೇ ಹೋಗುವುದೇ ಬೇಕಾಗಿದೆ ನಮ್ಮ ಆಳುವ ವರ್ಗಕ್ಕೆ. ಬೇಕಾದಷ್ಟು ಹಣವಿದೆ ರಸ್ತೆಗಳನ್ನು ಮಾಡುವುದಕ್ಕೆ. ಮೂಲ ಸೌಕರ್ಯದ ಹೆಸರಿನಲ್ಲಿ ಇಟ್ಟಿಗೆ ಬಟ್ಟಿಗಳಲ್ಲಿ ಜೀತಕ್ಕಿರುವಂತೆ ದುಡಿಯಲು, ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಲು, ರಸ್ತೆಗೆ ನಿಮ್ಮದೇ ಊರಿನ ಗುಡ್ಡ ಬೆಟ್ಟಗಳನ್ನು ಕಡಿದು ಮಣ್ಣು ಸುರಿಯಲು, ಸಿಮೆಂಟ್ ಕಲಸಿ ರಸ್ತೆಗೆ ಸುರಿಯಲು, ಮಾಡಿದ ಸಿಮೆಂಟ್ ರಸ್ತೆಗಳಿಗೆ ನಿಮ್ಮ ಕೆರೆ, ಹಳ್ಳಗಳಿಂದ ನೀರು ತಂದು ಸುರಿಯಲು. ಧೂಳು, ಸಿಮೆಂಟ್‌ಗಳಲ್ಲಿ ಮುಚ್ಚಿ ಹೋಗುವ ಅನಾಮಧೇಯರು ಬೇಕಾಗಿದ್ದಾರೆ.

ಶಾರದಾ ಗೋಪಾಲ

ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.


ಇದನ್ನೂ ಓದಿ; ಆಹಾರ ಆಹಾರವಾಗಿಯೇ ಇರಲಿ; ಅನವಶ್ಯಕ ಔಷಧವಾಗಿ ಬೇಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...