Homeಮುಖಪುಟಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು - ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು – ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

"ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? - GDP ಕುಸಿತದ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ"

- Advertisement -
- Advertisement -

ಕೇಂದ್ರ ಸರ್ಕಾರ 2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇದರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. “ಇಲ್ಲಿ ವಿವರಗಳನ್ನು ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ ‘ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್‌ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ ‘ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು. ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರ ಬೆಳೆಗೆ ಬೆಲೆ ಇಲ್ಲದೆ ದಿವಾಳಿ ಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

ಕೊರೊನಾದಿಂದಾಗಿ ನೆಲಕಚ್ಚಿರುವ ಆರ್ಥಿಕತೆಯ ಚೇತರಿಕೆಗಾಗಿ ಜನರ ಕೈಗೆ ದುಡ್ಡು ಸೇರುವಂತೆ ಮಾಡಬೇಕೆಂಬುದು ನಮ್ಮ ದೇಶದ ಮತ್ತು ಅಂತರರಾಷ್ಟ್ರೀಯ ಆರ್ಥಿಕ ತಜ್ಞರೆಲ್ಲರೂ ಸೂಚಿಸಿದ್ದ ಸಾಮಾನ್ಯ ಪರಿಹಾರ. ನಿರ್ಮಲಾ ಸೀತಾರಾಮನ್ ಜನರಿಂದ ಇನ್ನಷ್ಟು ಹಣವನ್ನು ಕಿತ್ತುಕೊಳ್ಳಲು ಹೊರಟಿದ್ದಾರೆಯೇ ಹೊರತು ಅವರ ಜೇಬಿಗೆ ಏನನ್ನೂ ಹಾಕಿಲ್ಲ. ತೆರಿಗೆ ಎನ್ನುವುದು ಬಜೆಟ್‌ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

“ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು, ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5 ರಿಂದ ಹಿಡಿದು ಶೇಕಡಾ 100 ರವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ. ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ; ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

“ಕೃಷಿ ಮೂಲಸೌಕರ್ಯ ಸೆಸ್‌ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ.

ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಇಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ 7 ವರ್ಷಗಳಿಂದ ರೈತರು ಮಾಡುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ವರ್ಗದ ಜನಗಳ ಮೇಲೆ ಇನ್ನೊಂದು ಹೊಡೆತ. ಖಾಸಗೀಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ ಬೀಳಲಿದೆ. ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ ಎಂದು ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಹರಿಹಾಯ್ದಿದ್ದಾರೆ.

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್‌ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ. ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್‌ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

“ವಿತ್ತೀಯ ಕೊರತೆ ಶೇ. 3.5ಕ್ಕೆ ತರುವುದಾಗಿ ಹೇಳಿದ್ದರು. ಈಗ ಶೇ. 9.7ಕ್ಕೆ ಏರಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾಗುತ್ತದೆ. ನನ್ನ ಪ್ರಕಾರ ವಿತ್ತೀಯ ಕೊರತೆ ಶೇ.14-15 ಇದೆ. ನರೇಂದ್ರ ಮೋದಿಯವರು ಅವರು ಪ್ರಧಾನಿಯಾದ ಬಳಿಕ ಜಿಡಿಪಿ ಬೆಳವಣಿಗೆ ಕುಸಿಯುತ್ತಲೇ ಇದೆ. ಡಾ. ಮನಮೋಹನಸಿಂಗ್ ಅವರ ಅವಧಿಯಲ್ಲಿ ಇದ್ದಿದ್ದಕ್ಕಿಂತ ಕಡಿಮೆಯಾಗುತ್ತಿದೆ. ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? ನಿರುದ್ಯೋಗ ಪ್ರಮಾಣ ನಗರದಲ್ಲಿ ಶೇ.9.2 ಇತ್ತು. ಇದರಿಂದ ಯುವಕರಿಗೆ ಉದ್ಯೋಗ ಎಲ್ಲಿ ಸಿಗುತ್ತದೆ. ಅವರು ಪಕೋಡಾ ಮಾರಲು ಹೋಗಬೇಕಾಗುತ್ತದೆ. ಈ ವರ್ಷ ಜಿಡಿಪಿ ಬೆಳವಣಿಗೆ -7.7% ಆಗಿದೆ” ಎಂದು ಹೇಳಿದ್ದಾರೆ.

“2020-2021ನೇ ಸಾಲಿಗೆ ಜಿಡಿಪಿ ಬೆಳವಣಿಗೆಯನ್ನು ಶೇ.11ಕ್ಕೆ ಏರಿಸುವುದಾಗಿ ಕೇಂದ್ರ ಘೋಷಣೆ ಮಾಡಿದೆ. ಇದು ನಂಬಲು ಸಾಧ್ಯವೇ? ಇದು ಸುಳ್ಳಿನ ಕಂತೆ. ಅಂಕಿ-ಅಂಶಗಳನ್ನು ನೀಡದೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿವರಗಳನ್ನು ಬಿಚ್ಚಿಟ್ಟದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 80 ಕೋಟಿ ಮಂದಿಗೆ ಅಂದರೆ ಶೇ. 80ರಷ್ಟು ಮಂದಿಗೆ ಪಡಿತರ ಚೀಟಿ ಮೂಲಕ ಆಹಾರ ಧಾನ್ಯ ನೀಡಲಾಗುತ್ತಿದೆ. ಶಾಂತಕುಮಾರ್ ಅವರ ಸಮಿತಿ ವರದಿ ಜಾರಿಗೆ ತಂದರೆ ಶೇ.20ರಷ್ಟು ಮಂದಿ ಮಾತ್ರ ಪಡಿತರ ಮೂಲಕ ಆಹಾರ ಧಾನ್ಯ ಪಡೆಯಲು ಅರ್ಹರಾಗುತ್ತಾರೆ. ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅಂದಾನಿ ಮೊದಲಾದ ಉದ್ಯಮಿಗಳಿಗೆ ಮಾರಲು ಪ್ರಧಾನಿ ಮೋದಿ ಹೊರಟಿದ್ದಾರೆ. ಇದರಿಂದ ದೇಶ ತನ್ನ ಆಸ್ತಿ ಕಳೆದುಕೊಳ್ಳುವುದಲ್ಲದೆ, ತಳಸಮುದಾಯಗಳು ಮೀಸಲಾತಿ ಸೌಲಭ್ಯವನ್ನೂ ಕಳೆದುಕೊಳ್ಳಲಿವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...