Homeಮುಖಪುಟಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಈಗಾಗಲೇ ಲಕ್ಷಾಂತರ ಜನರು ದೆಹಲಿ ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ- ದರ್ಶನ್ ಪಾಲ್

- Advertisement -
- Advertisement -

ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ಮುನ್ನಾ ದಿನ ದೆಹಲಿಯ ರೈತ ಮುಖಂಡರು ತಮ್ಮ ಹೋರಾಟದ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ಪಾರ್ಲಿಮೆಂಟ್‌ಗೆ ಪಾದಯಾತ್ರೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಘೋಷಿಸಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಅಧ್ಯಕ್ಷ ದರ್ಶನ್ ಪಾಲ್ ಮಾತನಾಡಿ ” ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ.

“ನಾಳೆ ನಾವು ದೆಹಲಿಯಲ್ಲಿ ರೈತ-ಟ್ರಾಕ್ಟರ್‌ ಪರೇಡ್‌ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಎರಡು ತಿಂಗಳುಗಳಿಂದ, ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಸುತ್ತಲೂ ಆರು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಲಕ್ಷಾಂತರ ಜನರು ದೆಹಲಿಯನ್ನು ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಗಡಿಗಳಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಇದುವರೆಗೂ ಗಮನ ಸೆಳೆಯುವ ವಿಭಿನ್ನ ಹೋರಾಟವನ್ನು ನಡೆಸಿದ್ದಾರೆ. ಟೋಲ್‌ ಪ್ಲಾಜಾಗಳಿಗೆ ಮುತ್ತಿಗೆ ಹಾಕಿ ವಾಹನಗಳು ಉಚಿತವಾಗಿ ಸಂಚರಿಸುವಂತೆ ಮಾಡುವುದು, ಹೆದ್ದಾರಿ ತಡೆ ನಡೆಸುವುದು, ದೇಶವ್ಯಾಪಿ ಬಂದ್‌ಗೆ ಕರೆ ನೀಡುವುದು ಮಾಡಿದ್ದಾರೆ. ತಮ್ಮ ಹೋರಾಟದ 2 ತಿಂಗಳ ಅಂಗವಾಗಿ ಜನವರಿ 26 ರಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇದರ ಮುಂದಿನ ನಡೆಯಾಗಿ ಪಾರ್ಲಿಮೆಂಟ್ ಚಲೋ ನಡೆಯಲಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ನಾಳೆಯ ಟ್ರ್ಯಾಕ್ಟರ್ ರ್ಯಾಲಿಯಂತೂ ವಿಶ್ವದ ಗಮನ ಸೆಳೆದಿದೆ. ಈ ರ್ಯಾಲಿ ತಡೆಯಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಶತಾಯ-ಗತಾಯ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ನಾಳೆ ರೈತರು ಶಾಂತಿಯುತವಾಗಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಹೋರಾಟವನ್ನು ವಿಶ್ವಕ್ಕೆ ಸಾರಲು ಮುಂದಾಗಿದ್ದಾರೆ.

ಗಣರಾಜ್ಯೋತ್ಸದ ದಿನ ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುತ್ತಿರುವಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಗಣತಂತ್ರ ಪರೇಡ್, ಟ್ರಾಕ್ಟರ್ ಪರೇಡ್‌ ಹೆಸರಿನಲ್ಲಿ ರೈತರ ಬೃಹತ್‌ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಂಘಟಿಸಲಾಗುತ್ತಿರುವ ಈ ಹೋರಾಟಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಅಭಿನಂದಿಸಿದೆ.


ಇದನ್ನೂ ಓದಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...