Homeಮುಖಪುಟಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಈಗಾಗಲೇ ಲಕ್ಷಾಂತರ ಜನರು ದೆಹಲಿ ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ- ದರ್ಶನ್ ಪಾಲ್

- Advertisement -
- Advertisement -

ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ಮುನ್ನಾ ದಿನ ದೆಹಲಿಯ ರೈತ ಮುಖಂಡರು ತಮ್ಮ ಹೋರಾಟದ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ಪಾರ್ಲಿಮೆಂಟ್‌ಗೆ ಪಾದಯಾತ್ರೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಘೋಷಿಸಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಅಧ್ಯಕ್ಷ ದರ್ಶನ್ ಪಾಲ್ ಮಾತನಾಡಿ ” ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ.

“ನಾಳೆ ನಾವು ದೆಹಲಿಯಲ್ಲಿ ರೈತ-ಟ್ರಾಕ್ಟರ್‌ ಪರೇಡ್‌ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಎರಡು ತಿಂಗಳುಗಳಿಂದ, ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಸುತ್ತಲೂ ಆರು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಲಕ್ಷಾಂತರ ಜನರು ದೆಹಲಿಯನ್ನು ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಗಡಿಗಳಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಇದುವರೆಗೂ ಗಮನ ಸೆಳೆಯುವ ವಿಭಿನ್ನ ಹೋರಾಟವನ್ನು ನಡೆಸಿದ್ದಾರೆ. ಟೋಲ್‌ ಪ್ಲಾಜಾಗಳಿಗೆ ಮುತ್ತಿಗೆ ಹಾಕಿ ವಾಹನಗಳು ಉಚಿತವಾಗಿ ಸಂಚರಿಸುವಂತೆ ಮಾಡುವುದು, ಹೆದ್ದಾರಿ ತಡೆ ನಡೆಸುವುದು, ದೇಶವ್ಯಾಪಿ ಬಂದ್‌ಗೆ ಕರೆ ನೀಡುವುದು ಮಾಡಿದ್ದಾರೆ. ತಮ್ಮ ಹೋರಾಟದ 2 ತಿಂಗಳ ಅಂಗವಾಗಿ ಜನವರಿ 26 ರಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇದರ ಮುಂದಿನ ನಡೆಯಾಗಿ ಪಾರ್ಲಿಮೆಂಟ್ ಚಲೋ ನಡೆಯಲಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ನಾಳೆಯ ಟ್ರ್ಯಾಕ್ಟರ್ ರ್ಯಾಲಿಯಂತೂ ವಿಶ್ವದ ಗಮನ ಸೆಳೆದಿದೆ. ಈ ರ್ಯಾಲಿ ತಡೆಯಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಶತಾಯ-ಗತಾಯ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ನಾಳೆ ರೈತರು ಶಾಂತಿಯುತವಾಗಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಹೋರಾಟವನ್ನು ವಿಶ್ವಕ್ಕೆ ಸಾರಲು ಮುಂದಾಗಿದ್ದಾರೆ.

ಗಣರಾಜ್ಯೋತ್ಸದ ದಿನ ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುತ್ತಿರುವಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಗಣತಂತ್ರ ಪರೇಡ್, ಟ್ರಾಕ್ಟರ್ ಪರೇಡ್‌ ಹೆಸರಿನಲ್ಲಿ ರೈತರ ಬೃಹತ್‌ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಂಘಟಿಸಲಾಗುತ್ತಿರುವ ಈ ಹೋರಾಟಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಅಭಿನಂದಿಸಿದೆ.


ಇದನ್ನೂ ಓದಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...