Homeಮುಖಪುಟಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

- Advertisement -
- Advertisement -

ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ (ಜ.31) ಆರಂಭಗೊಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಡಿಸೆಂಬರ್ 24ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿ ತನ್ನ ಭಾಷಣ ಪ್ರಾರಂಭಿಸಿದರು.

“ಮೂರನೇ ಅವಧಿಯ ಕೇಂದ್ರದ ಎನ್‌ಡಿಎ ಸರ್ಕಾರ “ಹಿಂದಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ” ಎಂದು ರಾಷ್ಟ್ರಪತಿ ಕೊಂಡಾಡಿದರು.

ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮತ್ತು ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆಯಾಗಲಿದೆ. ಶನಿವಾರ (ಫೆ.1) ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿರುವ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯು, 2024–25ರ (ಏಪ್ರಿಲ್–ಮಾರ್ಚ್) ಆರ್ಥಿಕತೆಯ ಸ್ಥಿತಿ ಮತ್ತು ವಿವಿಧ ಸೂಚಕಗಳ ಒಳನೋಟಗಳನ್ನು ಮತ್ತು ಮುಂದಿನ ಹಣಕಾಸು ವರ್ಷದ ಮುನ್ನೋಟವನ್ನು ಒದಗಿಸಲಿದೆ.

ಬಜೆಟ್‌ ಅಧಿವೇಶನದಲ್ಲಿ, ಬ್ಯಾಂಕಿಂಗ್ ನಿಯಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿರುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024 ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಲಿದೆ ಎನ್ನಲಾದ ರೈಲ್ವೆ (ತಿದ್ದುಪಡಿ) ಮಸೂದೆ-2024 ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

ಗಮನಾರ್ಹವಗಿ, ದೇಶದಾದ್ಯಂತ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನಗಳನ್ನು ಸುಧಾರಿಸುತ್ತದೆ ಎನ್ನಲಾದ ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ 2024, ಧಾರ್ಮಿಕ ದತ್ತಿಗಳ ನಿರ್ವಹಣೆಯನ್ನು ಸುಧಾರಿಸುತ್ತೆ ಎನ್ನಲಾದ ವಕ್ಫ್ (ತಿದ್ದುಪಡಿ) ಮಸೂದೆ-2024 ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ-2024 ಕೂಡ ಮಂಡಿಸುವ ಸಾಧ್ಯತೆಯಿದೆ.

ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ- 2024, ರೈಲ್ವೆ (ತಿದ್ದುಪಡಿ) ಮಸೂದೆ- 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ-2024, ತೈಲಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ-2024, ಬಾಯ್ಲರ್ ಮಸೂದೆ-2024, ವಕ್ಫ್ (ತಿದ್ದುಪಡಿ) ಮಸೂದೆ- 2024, ಕರಾವಳಿ ಸಾಗಣೆ ಮಸೂದೆ-2024, ವ್ಯಾಪಾರಿ ಸಾಗಣೆ ಮಸೂದೆ-2024 ಮತ್ತು ಹಣಕಾಸು ಮಸೂದೆ- 2025 ಸೇರಿವೆ.

ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿಯಲಿದೆ. ವಿರಾಮದ ನಂತರ, ಎರಡೂ ಸದನಗಳು ಮಾರ್ಚ್ 10 ರಂದು ಮತ್ತೆ ಪ್ರಾರಂಭಗೊಳ್ಳಲಿವೆ. ಏಪ್ರಿಲ್ 4 ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...