Homeಮುಖಪುಟಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್‌ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ...

ಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್‌ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ ಮುಂದೂಡಿಕೆ

- Advertisement -
- Advertisement -

ಲೋಕಸಭೆಯ ಕಲಾಪವನ್ನು ಮಾರ್ಚ್ 10ರವರೆಗೆ ಮುಂದೂಡಲಾಗಿದ್ದು, ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪಗಳು ಇಂದು (ಫೆ.13) ಮುಕ್ತಾಯಗೊಂಡಿದೆ.

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತ ತನ್ನ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿತು. ಈ ವೇಳೆ, ಸರ್ಕಾರ ನಮ್ಮ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ತೆಗೆದು ಹಾಕಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು.

ಇದಕ್ಕೂ ಮುನ್ನ ಇಂದು ರಾಜ್ಯಸಭೆಯಲ್ಲೂ ಜೆಪಿಸಿ ವರದಿ ಮಂಡನೆಯಾಗಿದೆ. ಅಲ್ಲೂ ಪ್ರತಿಪಕ್ಷ ಸದಸ್ಯರು ಪ್ರತಿಭಟಿಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಪ್ರತಿಪಕ್ಷ ಸದಸ್ಯರ ಭಿನ್ನಾಭಿಪ್ರಾಯಗಳನ್ನು ತಿರಸ್ಕರಿಸಲಾಗಿದೆ ಎಂದ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಪಿಸಿ ವರದಿಯನ್ನು ‘ಪ್ರಜಾಪ್ರಭುತ್ವ ವಿರೋಧಿ’ ಎಂದು ಕರೆದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ ನಡುವೆಯೇ, ಜೆಪಿಸಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಲೋಕಸಭೆಯಲ್ಲಿ ಸಮಿತಿಯ ವರದಿಯನ್ನು ಮಂಡಿಸಿದರು.

ವಿರೋಧ ಪಕ್ಷಗಳ ಪ್ರತಿಭಟನೆಯ ವೇಳೆ ಮಧ್ಯ ಪ್ರವೇಶಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸೇರಿಸಲು ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ” ಎಂದು ಹೇಳಿದರು.

“ವಿರೋಧ ಪಕ್ಷದ ಕೆಲವು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಸಂಪೂರ್ಣವಾಗಿ (ವಕ್ಫ್ ಜೆಪಿಸಿ ವರದಿಯಲ್ಲಿ) ಸೇರಿಸಲಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಕಳವಳಗಳನ್ನು ಪರಿಗಣಿಸಿ, ಏನು ಬೇಕಾದರು ಸೇರಿಸಬಹುದು. ನನ್ನ ಪಕ್ಷಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನನ್ನ ಪಕ್ಷದ ಪರವಾಗಿ ನಾನು ಹೇಳಲು ಬಯಸುತ್ತೇನೆ” ಎಂದು ಅಮಿತ್ ಶಾ ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ಸದನ ಪುನರಾರಂಭಗೊಂಡಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಆದಾಯ ತೆರಿಗೆ ಮಸೂದೆ-2025’ ಅನ್ನು ಮಂಡಿಸಿದರು. ಇದನ್ನೂ ವಿರೋಧಿಸಿದ ಪ್ರತಿಪಕ್ಷ ಸದಸ್ಯರು, ಲೋಕಸಭೆಯ ಆಯ್ಕೆ ಸಮಿತಿಗೆ ಉಲ್ಲೇಖಿಸುವಂತೆ ಸ್ಪೀಕರ್‌ಗೆ ಒತ್ತಾಯಿಸಿದರು.

ಇಂದು ಲೋಕಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಅದಾನಿ ಇಂಧನ ಯೋಜನೆಗೆ ಪಾಕಿಸ್ತಾನ-ಭಾರತ ಗಡಿಯಲ್ಲಿ ಜಾಗ ನೀಡಲು ಭದ್ರತಾ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂಬ ಮಾಧ್ಯಮ ವರದಿಯನ್ನು ಪ್ರಸ್ತಾಪಿಸಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟಿಸಿದರು. ಇದರಿಂದ ಕೋಲಾಹಲ ಉಂಟಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ವಕ್ಫ್ ಮಸೂದೆ ಕುರಿತು ಜೆಪಿಸಿ ವರದಿಗೆ ಸಂಬಂಧಿಸಿದ ಗದ್ದಲದ ನಂತರ ಸದನದ ಕಲಾಪಗಳನ್ನು ಮಾರ್ಚ್ 10ರವರೆಗೆ ಮುಂದೂಡಲಾಯಿತು. ಮಾರ್ಚ್ 10ರಂದು ಬೆಳಿಗ್ಗೆ 11 ಗಂಟೆಯವರೆಗೆ ಸದನದ ಕಲಾಪಗಳನ್ನು ಮುಂದೂಡಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.

“ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ 17 ಗಂಟೆ 23 ನಿಮಿಷಗಳ ಕಾಲ ನಡೆಯಿದೆ. 173 ಸಂಸದರು ಉತ್ಪಾದಕ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಬಜೆಟ್ ಮೇಲಿನ ಚರ್ಚೆಯ ಸಮಯದಲ್ಲಿ, 170 ಸದಸ್ಯರು 16 ಗಂಟೆ 13 ನಿಮಿಷಗಳ ಕಾಲ ಭಾಗವಹಿಸಿದ್ದಾರೆ” ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದರು.

ಬಜೆಟ್ ಅಧಿವೇಶನದ ಎರಡನೇ ಹಂತದ ಕಲಾಪಗಳು ಮಾರ್ಚ್ 10 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ.

ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...