Homeಮುಖಪುಟಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್‌ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ...

ಬಜೆಟ್ ಅಧಿವೇಶನ | ಲೋಕಸಭೆಯಲ್ಲಿ ವಕ್ಫ್‌ ಜೆಪಿಸಿ ವರದಿ ಕೋಲಾಹಲ : ಮಾರ್ಚ್ 10ರವರೆಗೆ ಕಲಾಪ ಮುಂದೂಡಿಕೆ

- Advertisement -
- Advertisement -

ಲೋಕಸಭೆಯ ಕಲಾಪವನ್ನು ಮಾರ್ಚ್ 10ರವರೆಗೆ ಮುಂದೂಡಲಾಗಿದ್ದು, ಬಜೆಟ್ ಅಧಿವೇಶನದ ಮೊದಲ ಹಂತದ ಕಲಾಪಗಳು ಇಂದು (ಫೆ.13) ಮುಕ್ತಾಯಗೊಂಡಿದೆ.

ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತ ತನ್ನ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಿತು. ಈ ವೇಳೆ, ಸರ್ಕಾರ ನಮ್ಮ ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ತೆಗೆದು ಹಾಕಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು.

ಇದಕ್ಕೂ ಮುನ್ನ ಇಂದು ರಾಜ್ಯಸಭೆಯಲ್ಲೂ ಜೆಪಿಸಿ ವರದಿ ಮಂಡನೆಯಾಗಿದೆ. ಅಲ್ಲೂ ಪ್ರತಿಪಕ್ಷ ಸದಸ್ಯರು ಪ್ರತಿಭಟಿಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಯಿತು. ಪ್ರತಿಪಕ್ಷ ಸದಸ್ಯರ ಭಿನ್ನಾಭಿಪ್ರಾಯಗಳನ್ನು ತಿರಸ್ಕರಿಸಲಾಗಿದೆ ಎಂದ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಪಿಸಿ ವರದಿಯನ್ನು ‘ಪ್ರಜಾಪ್ರಭುತ್ವ ವಿರೋಧಿ’ ಎಂದು ಕರೆದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದ ನಡುವೆಯೇ, ಜೆಪಿಸಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಲೋಕಸಭೆಯಲ್ಲಿ ಸಮಿತಿಯ ವರದಿಯನ್ನು ಮಂಡಿಸಿದರು.

ವಿರೋಧ ಪಕ್ಷಗಳ ಪ್ರತಿಭಟನೆಯ ವೇಳೆ ಮಧ್ಯ ಪ್ರವೇಶಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ಭಿನ್ನಾಭಿಪ್ರಾಯದ ಟಿಪ್ಪಣಿಗಳನ್ನು ಸೇರಿಸಲು ಸರ್ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ” ಎಂದು ಹೇಳಿದರು.

“ವಿರೋಧ ಪಕ್ಷದ ಕೆಲವು ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಸಂಪೂರ್ಣವಾಗಿ (ವಕ್ಫ್ ಜೆಪಿಸಿ ವರದಿಯಲ್ಲಿ) ಸೇರಿಸಲಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ಕಳವಳಗಳನ್ನು ಪರಿಗಣಿಸಿ, ಏನು ಬೇಕಾದರು ಸೇರಿಸಬಹುದು. ನನ್ನ ಪಕ್ಷಕ್ಕೆ ಯಾವುದೇ ಆಕ್ಷೇಪವಿಲ್ಲ ಎಂದು ನನ್ನ ಪಕ್ಷದ ಪರವಾಗಿ ನಾನು ಹೇಳಲು ಬಯಸುತ್ತೇನೆ” ಎಂದು ಅಮಿತ್ ಶಾ ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ಸದನ ಪುನರಾರಂಭಗೊಂಡಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ‘ಆದಾಯ ತೆರಿಗೆ ಮಸೂದೆ-2025’ ಅನ್ನು ಮಂಡಿಸಿದರು. ಇದನ್ನೂ ವಿರೋಧಿಸಿದ ಪ್ರತಿಪಕ್ಷ ಸದಸ್ಯರು, ಲೋಕಸಭೆಯ ಆಯ್ಕೆ ಸಮಿತಿಗೆ ಉಲ್ಲೇಖಿಸುವಂತೆ ಸ್ಪೀಕರ್‌ಗೆ ಒತ್ತಾಯಿಸಿದರು.

ಇಂದು ಲೋಕಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಅದಾನಿ ಇಂಧನ ಯೋಜನೆಗೆ ಪಾಕಿಸ್ತಾನ-ಭಾರತ ಗಡಿಯಲ್ಲಿ ಜಾಗ ನೀಡಲು ಭದ್ರತಾ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂಬ ಮಾಧ್ಯಮ ವರದಿಯನ್ನು ಪ್ರಸ್ತಾಪಿಸಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟಿಸಿದರು. ಇದರಿಂದ ಕೋಲಾಹಲ ಉಂಟಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ವಕ್ಫ್ ಮಸೂದೆ ಕುರಿತು ಜೆಪಿಸಿ ವರದಿಗೆ ಸಂಬಂಧಿಸಿದ ಗದ್ದಲದ ನಂತರ ಸದನದ ಕಲಾಪಗಳನ್ನು ಮಾರ್ಚ್ 10ರವರೆಗೆ ಮುಂದೂಡಲಾಯಿತು. ಮಾರ್ಚ್ 10ರಂದು ಬೆಳಿಗ್ಗೆ 11 ಗಂಟೆಯವರೆಗೆ ಸದನದ ಕಲಾಪಗಳನ್ನು ಮುಂದೂಡಲಾಗಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಘೋಷಿಸಿದರು.

“ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ 17 ಗಂಟೆ 23 ನಿಮಿಷಗಳ ಕಾಲ ನಡೆಯಿದೆ. 173 ಸಂಸದರು ಉತ್ಪಾದಕ ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಬಜೆಟ್ ಮೇಲಿನ ಚರ್ಚೆಯ ಸಮಯದಲ್ಲಿ, 170 ಸದಸ್ಯರು 16 ಗಂಟೆ 13 ನಿಮಿಷಗಳ ಕಾಲ ಭಾಗವಹಿಸಿದ್ದಾರೆ” ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದರು.

ಬಜೆಟ್ ಅಧಿವೇಶನದ ಎರಡನೇ ಹಂತದ ಕಲಾಪಗಳು ಮಾರ್ಚ್ 10 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ.

ವಕ್ಫ್ ಮಸೂದೆಯನ್ನು ಜೆಪಿಸಿಗೆ ಹಿಂತಿರುಗಿಸುವಂತೆ ಒತ್ತಾಯಿಸಿದ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...