Homeಮುಖಪುಟಬಜೆಟ್‌ ಪ್ರತಿಯಲ್ಲಿ '₹' ಬದಲಿಗೆ 'ரூ' ಬಳಕೆ | ಸ್ಟಾಲಿನ್ ನಿರ್ಧಾರ ಶ್ಲಾಘಿಸಿ ಪತ್ರ ಬರೆದ...

ಬಜೆಟ್‌ ಪ್ರತಿಯಲ್ಲಿ ‘₹’ ಬದಲಿಗೆ ‘ரூ’ ಬಳಕೆ | ಸ್ಟಾಲಿನ್ ನಿರ್ಧಾರ ಶ್ಲಾಘಿಸಿ ಪತ್ರ ಬರೆದ ಕರವೇ!

- Advertisement -
- Advertisement -

ಕಳೆದ 16 ವರ್ಷಗಳಿಂದ ಕೇಂದ್ರ ಸರ್ಕಾರ ಅಧಿಕೃತವಾಗಿ ಬಳಸುತ್ತಿರುವ ದೇವನಾಗರಿ ಲಿಪಿಯ ರೂಪಾಯಿ ಚಿಹ್ನೆಯನ್ನು ಬಜೆಟ್‌ ಪ್ರತಿಯಲ್ಲಿ ತಮಿಳು ಲಿಪಿ ರೂಪಾಯಿ ಚಿಹ್ನೆಯೊಂದಿಗೆ ಬದಲಾಯಿಸಿದ ತಮಿಳುನಾಡು ಸರ್ಕಾರದ ನಿರ್ಧಾರವನ್ನು ಕನ್ನಡ ರಕ್ಷಣಾ ವೇದಿಕೆ (ಕರವೇ) ಶ್ಲಾಘಿಸಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದೆ.  

ತಮಿಳುನಾಡಿನ ದ್ರಾವಿಡ ಚಳುವಳಿಯನ್ನು ‘ಇಡೀ ದಕ್ಷಿಣ ಭಾರತದ ದ್ರಾವಿಡ ಭಾಷಿಕರ ಹೆಮ್ಮೆ’ ಎಂದು ಪತ್ರದಲ್ಲಿ ಕರವೇ ಕರೆದಿದ್ದು, ಎಲ್ಲಾ ದಕ್ಷಿಣ ರಾಜ್ಯಗಳು ದ್ರಾವಿಡ ಭಾಷೆಗಳ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಡುವುದು ಮತ್ತು ತಮಿಳುನಾಡಿನ ಮಾದರಿಯನ್ನು ಅನುಸರಿಸುವುದು ಕಡ್ಡಾಯವಾಗಿದೆ ಎಂದು ಅದು ಪತ್ರದಲ್ಲಿ ತಿಳಿಸಿದೆ. ಬಜೆಟ್‌ ಪ್ರತಿಯಲ್ಲಿ

ಮಾರ್ಚ್ 14 ರಂದು ವಿಧಾನಸಭೆಯಲ್ಲಿ ಮಂಡಿಸಲಾದ 2025-26 ರ ಬಜೆಟ್‌ನ ಪ್ರತಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವು ರೂಪಾಯಿ ಲೋಗೋವನ್ನು ದೇವನಾಗರಿ ರೂಪಾಯಿ ಚಿಹ್ನೆಯಿಂದ ತಮಿಳು ಅಕ್ಷರದೊಂದಿಗೆ ಬದಲಾಯಿಸಿತ್ತು.

“ಒಬ್ಬ ಹೆಮ್ಮೆಯ ಭಾರತೀಯ ಮತ್ತು ಕನ್ನಡಿಗನಾಗಿ, ನಾನು ಈ ಹೆಜ್ಜೆಯನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಈ ದಿಟ್ಟ ಕ್ರಮಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಕಡೆಗೆ ಯಾವುದೇ ಟೀಕೆಗಳು ಮತ್ತು ಪ್ರತಿರೋಧಗಳು ಬಂದರೂ, ಉತ್ತರ ಭಾರತೀಯರು ಹಿಂದಿ ಹೇರುತ್ತಿರುವ ನಿರಂತರ ಪ್ರಯತ್ನಗಳಿಗೆ ನೀವು ನೀಡಿರುವ ಈ ಸಾಂಕೇತಿಕ ಪ್ರತಿರೋಧ ನಿಜಕ್ಕೂ ಶ್ಲಾಘನೀಯ” ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ಮಾರ್ಚ್ 15 ರಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಉತ್ತರ ಭಾರತದ ಹಿಂದಿ ಲಾಭಕೋರರು ‘ರಾಷ್ಟ್ರೀಯ ಭಾಷೆ’ಯನ್ನಾಗಿ ಮಾಡುವ ನೆಪದಲ್ಲಿ ಇಡೀ ದೇಶದ ಕೋಟ್ಯಂತರ ಹಿಂದಿಯೇತರ ಭಾಷಿಕರ ಮೇಲೆ ನಿರಂತರವಾಗಿ ಹಿಂದಿ ಹೇರುತ್ತಿದ್ದಾರೆ ಅಥವಾ ಬಲವಂತಪಡಿಸುತ್ತಿದ್ದಾರೆ. ಅವರು ತ್ರಿಭಾಷಾ ಸೂತ್ರವನ್ನು ಹೇರುತ್ತಿದ್ದು, ಇತರ ಭಾರತೀಯ ಭಾಷೆಗಳನ್ನು ಕತ್ತು ಹಿಸುಕುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕವೂ ಹಿಂದಿ ಹೇರಿಕೆ ಮಾಡಲಾಗುತ್ತಿದೆ.” ಎಂದು ನಾರಾಯಣ ಗೌಡ ಅವರು ಪತ್ರದಲ್ಲಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ

ಇದೇ ವೇಳೆ ಸಿದ್ದರಾಮಯ್ಯ ಅವರಿಗೂ ಪತ್ರ ಬರೆದಿರುವ ಅವರು, ತಮಿಳುನಾಡು ಸರ್ಕಾರದ ಮಾದರಿಯನ್ನು ಅನುಸರಿಸಿ, ದೇವನಾಗರಿ ಲಿಪಿಯ ರೂಪಾಯಿ ಚಿಹ್ನೆಯ ಬದಲಿಗೆ ಕನ್ನಡ ಲಿಪಿಯ ರೂಪಾಯಿ ಚಿಹ್ನೆಯನ್ನು ಸಿದ್ಧಪಡಿಸಿ ಬಳಸಬೇಕೆಂದು ಒತ್ತಾಯಿಸಿದ್ದಾರೆ. ಜೊತೆಗೆ, ಹಿಂದಿ ಹೇರಿಕೆ ವಿಷಯದ ಬಗ್ಗೆ ಕನ್ನಡಿಗರ ಪರವಾಗಿ ನಿಂತಿರುವ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...