Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...