Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಅಲಿಗಢದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...