Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...