Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...