Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...