Homeಕರ್ನಾಟಕಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

ಬಫರ್ ಝೋನ್ ಕಡಿತ ರಿಯಲ್ ಎಸ್ಟೇಟ್ ಮಾಫಿಯಾಗೆ ಲಾಭ ಮಾಡಿಕೊಡುವ ಹುನ್ನಾರ: ಎ.ಟಿ ರಾಮಸ್ವಾಮಿ

- Advertisement -
- Advertisement -

ರಾಜ್ಯದಲ್ಲಿ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ (ಸಂರಕ್ಷಿತ ಪ್ರದೇಶ) ಕಡಿಮೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಿರ್ಧಾರ ಪರಿಸರಕ್ಕೆ ಅತ್ಯಂತ ಮಾರಕವಾಗಿದ್ದು, ರಿಯಲ್ ಎಸ್ಟೇಟ್ ಮಾಫಿಯಾಗೆ ಮಣೆ ಹಾಕಲು ನಮ್ಮ ಪ್ರಾಕೃತಿಕ ಸಂಪತ್ತನ್ನೇ ನಾಶ ಮಾಡುವ ಹುನ್ನಾರ ಎಂದು ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆ ‘ಪರಿಸರಕ್ಕಾಗಿ ನಾವು’ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಯ ರಾಜ್ಯಾಧ್ಯಕ್ಷ ಎ.ಟಿ ರಾಮಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ 2014ರ (ಕೆಟಿಸಿಡಿಎ) ಕಾಯ್ದೆಗೆ ತಿದ್ದುಪಡಿ ತಂದು, ಕೆರೆಗಳ ಸಂರಕ್ಷಿತ ಪ್ರದೇಶವನ್ನು ಕಡಿಮೆ ಮಾಡುವುದರಿಂದ, ಈಗಾಗಲೇ ಮಾಲಿನ್ಯದಿಂದ ತುಂಬಿರುವ ಮತ್ತಷ್ಟು ಕೊಳಕನ್ನು ಕೆರೆಗಳಿಗೆ ನೇರವಾಗಿ ಹರಿಸಲು ರಿಯಲ್ ಎಸ್ಟೇಟ್ ಮಾಫಿಯಾದವರಿಗೆ ಅನುವು ಮಾಡಿಕೊಟ್ಟಂತಾಗುತ್ತದೆ ಎಂದಿದ್ದಾರೆ.

ಪರಿಸರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನೈಸರ್ಗಿಕ ಸಂಪತ್ತು ಉಳಿಸಬೇಕೇಂಬ ಕಾಳಜಿಯುಳ್ಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯೇ ಇಂತಹ ನಿರ್ಧಾರ ಕೈಗೊಂಡಿದೆ ಎಂದರೆ, ಸಭೆಯ ತೀರ್ಮಾನದ ಹಿಂದಿನ ರಾಜಕೀಯ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಕೆರೆಗಳು ಹಾಗೂ ಮಳೆನೀರು ಸಾಗಿಸುವ ರಾಜಕಾಲುವೆಗಳು ಸುತ್ತಮುತ್ತಲಿನ ಪ್ರದೇಶ ಸಂರಕ್ಷಿತವಾಗಿರುವುದರಿಂದ ಅವುಗಳ ಒತ್ತುವರಿಗೆ ತಡೆಯಾಗುತ್ತದೆ. ಮಾಲಿನ್ಯ ಹರಿಯುವುದಕ್ಕೂ ತಡೆಯಾಗಿ, ಜೀವವೈವಿಧ್ಯತೆಗೆ ಅನುವಾಗುತ್ತದೆ. ಇಂತಹ ಬಫರ್ ಝೋನ್ ಅನ್ನೇ ಬಹುತೇಕ ಇಲ್ಲವಾಗಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವುದು ನಿಜಕ್ಕೂ ದುಃಖ ತರುವಂತಹ ವಿಷಯ ಎಂದಿದ್ದಾರೆ.

ಸಾಮಾಜಿಕ ಕಾಳಜಿಯುಳ್ಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಸರದ ಮೇಲೆ ಇಂತಹ ಅಕ್ರಮಣ ಮಾಡುವ ನಿರ್ಧಾರವನ್ನು ತೆಗೆದುಕೊಂಡಿರುವುದು ಬೇಸರ ಮೂಡಿಸಿದೆ. ಅವರ ಸುತ್ತಮುತ್ತಲಿನ ಪಟ್ಟಭದ್ರ ಹಿತಾಸಕ್ತಿಗಳಿಂದ ಇಂತಹ ನಿರ್ಧಾರವಾಗಿದ್ದರೆ ಮುಖ್ಯಮಂತ್ರಿಗಳು ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಹಿಂದಿನಂತೆಯೇ ವಿಸ್ತಾರವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಒಂದು ಕೆರೆಯೂ ಕುಡಿಯುವ ನೀರನ್ನು ಹೊಂದಿಲ್ಲ. ಅಂತಹ ಯೋಗ್ಯತೆಯನ್ನು ಭೂ ಮಾಫಿಯಾದವರು, ರಿಯಲ್ ಎಸ್ಟೇಟ್ ಕುಳಗಳು ಕಳೆದಿದ್ದಾರೆ. ಕೆರೆಗಳ ಸುತ್ತ ಸಾವಿರಾರು ಅಪಾರ್ಟ್ ಮೆಂಟ್ ಗಳಿವೆ. ಎಸ್ ಟಿಪಿ ಅಳವಡಿಸುವುದು ಕಡ್ಡಾಯವಾಗಿದ್ದರೂ ಇವರಲ್ಲಿ ಬಹುತೇಕರು ತ್ಯಾಜ್ಯ ನೀರನ್ನು ಸಂಸ್ಕರಿಸುತ್ತಿಲ್ಲ. ತ್ಯಾಜ್ಯ ನೀರನ್ನೇ ಕೆರೆಗಳಿಗೆ ಹರಿಸುತ್ತಿದ್ದಾರೆ. ಇನ್ನು ಬಫರ್ ಝೋನ್ ಅನ್ನೂ ಕಡಿಮೆ ಮಾಡಿದರೆ ಅವರೆಲ್ಲರೂ ತ್ಯಾಜ್ಯವನ್ನು ನೇರವಾಗಿ ಕೆರೆಗೇ ಬಿಡುವುದಕ್ಕೆ ಅನುವಾಗುತ್ತದೆ. ಇಂತಹ ಕೆರೆಗಳು ರೋಗರುಜಿನಗಳನ್ನು ಹರಡುವ ತಾಣವಾಗುತ್ತವೆ ಎಂದು ರಾಮಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ರಾಜಕಾಲುವೆಗಳ ಬಫರ್ ಝೋನ್ ಅನ್ನು 15 ಮೀಟರ್, 10 ಮೀಟರ್, 5 ಮೀಟರ್‌ಗೆ ನಿಗದಿಪಡಿಸಲು ಸರ್ಕಾರ ಹೊರಟಿದೆ. ಜೊತೆಗೆ ಆ ಬಫರ್ ಝೋನ್‌ನಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲು ಯೋಜನೆ ರೂಪಿಸಿ ಟೆಂಡರ್ ಅನ್ನೂ ಕರೆಯಲಾಗಿದೆ. ಇದು ಕೂಡ ಬಹಳ ಅಪಾಯಕಾರಿ ಯೋಜನೆಯಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕು ಎಂದು ಪರಿಸರಕ್ಕಾಗಿ ನಾವು ಸಂಘಟನೆ ಒತ್ತಾಯಿಸಿದೆ.

ಪರಿಸರಕ್ಕೆ ಮಾರಕವಾಗುವ ಬಫರ್ ಝೋನ್ ಕಡಿಮೆ ಮಾಡುವುದನ್ನು ಸರ್ಕಾರಕ್ಕೆ ಸಲಹೆ ನೀಡಿರುವವರಿಗೆ, ಹಿರಿಯರೂ ಹಾಗೂ ಪ್ರಪಂಚವನ್ನು ಹಲವು ದಶಕಗಳಿಂದ ಕಂಡಿರುವ ರಾಜಕಾರಿಣಿಯೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣೆ ಹಾಕಬಾರದು. ರಿಯಲ್ ಎಸ್ಟೇಟ್ ಕುಳಗಳಿಗೆ ಹಣಮಾಡಲು ಸಾಕಷ್ಟು ಜಾಗವಿದೆ. ಕೆರೆ ಮತ್ತು ರಾಜಕಾಲುವೆಗಳು ಹಾಗೂ ಬಫರ್ ಝೋನ್ ಅನ್ನು ಅವರಿಂದ ಉಳಿಸಬೇಕು. ಈ ಬಗ್ಗೆ ಕಠಿಣ ಕ್ರಮವನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಲೇಬೇಕಿದೆ ಎಂದಿದೆ.

‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಎಲ್ಲವನ್ನೂ ಯೋಜನೆಗಳಿಂದಲೇ ಅಳೆಯಬಾರದು. ಮೂಲಸೌಕರ್ಯಕ್ಕೆ ಬೃಹತ್ ಯೋಜನೆಗಳು ಬೇಕು. ಹಾಗೆಂದು ಪರಿಸರವನ್ನು ಹಾಳು ಮಾಡುವ ಮಾಫಿಯಾಗೆ ಸರ್ಕಾರ ಮಣಿಯಬಾರದು. ಲಕ್ಷಾಂತರ ಸಸಿಗಳನ್ನು ನೆಟ್ಟರೆ, ಸಾವಿರಾರು ವಿದ್ಯಾರ್ಥಿಗಳಿಗೆ ಸಸಿಗಳನ್ನು ಬೆಳಸುವ ಜವಾಬ್ದಾರಿಯನ್ನು ನೀಡಿದರಷ್ಟೇ ಪರಿಸರ ಉಳಿಯುವುದಿಲ್ಲ. ಜಲಮೂಲಗಳಾದ ಕೆರೆಗಳಿಗೆ ಕಿಂಚಿತ್ತೂ ಅಡಚಣೆಯಾಗಬಾರದು. ರಾಜಕಾಲುವೆಯ ಸುತ್ತಮುತ್ತ ಜೀವವೈವಿಧ್ಯತೆಗೆ ಅವಕಾಶ ಮಾಡಲು ಬಫರ್ ಝೋನ್ ಅಗತ್ಯವಿದೆ. ಹೀಗಾಗಿ, ಕೆರೆಗಳು, ರಾಜಕಾಲುವೆಗಳು, ಬಫರ್ ಝೋನ್ ಅನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಯಾವುದೇ ಕಾರಣಕ್ಕೂ ಕೆರೆಗಳು ಹಾಗೂ ರಾಜಕಾಲುವೆಗಳ ಬಫರ್ ಝೋನ್ ಅನ್ನು ಕಡಿಮೆ ಮಾಡಬಾರದು. ಇದರ ಪ್ರಸ್ತಾವವನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಸಿಎಂ ಮತ್ತು ಡಿಸಿಎಂಗೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...