Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...