Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...