Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....