Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...