Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...