Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...