Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...