Homeಚಳವಳಿನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ...

ನಿರ್ಜೀವ ಕೆರೆ ಜಾಗದಲ್ಲಿ ಮನೆ ನಿರ್ಮಿಸುವುದಾಗಿ ಸಚಿವ ಸೋಮಣ್ಣ ಹೇಳಿಕೆ ನ್ಯಾಯಾಂಗ ನಿಂದನೆ ಎಂದ ಪರಿಸರವಾದಿ ಲಿಯೋ ಸಲ್ಡಾನಾ

- Advertisement -
- Advertisement -

ರಾಜ್ಯದ ನಿರ್ಜೀವ ಕೆರೆಗಳ ಜಾಗದಲ್ಲಿ 52,000 ಮನೆಗಳನ್ನು ನಿರ್ಮಿಸುವುದಾಗಿ ವಸತಿ ಸಚಿವ ವಿ ಸೋಮಣ್ಣ ಹೇಳಿರುವುದು ನ್ಯಾಯಾಂಗ ನಿಂದನೆಯಾಗಿದೆ ಎಂದು ಪರಿಸರವಾದಿ ಲಿಯೋ ಸಲ್ಡಾನಾ ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, ”ಕೆರೆ ನಿರ್ಮಾಣದ ಕಲ್ಪನೆಯೇ ಸಚಿವರಿಗೆ ತಿಳಿದಂತಿಲ್ಲ. ಕೆರೆಗಳು ಬೇಸಿಗೆಯಲ್ಲಿ ಬತ್ತಿಹೋಗುತ್ತವೆ. ಎಷ್ಟೋ ವರ್ಷಗಳ ಕಾಲ ಸರಿಯಾದ ಮಳೆಯಾಗದೆ ಕೆರೆಗಳಲ್ಲಿ ನೀರು ಇರುವುದಿಲ್ಲ. ಹಾಗಂತ ಅವುಗಳನ್ನು ಮುಚ್ಚುವುದಲ್ಲ. ಮಳೆಯ ನೀರು ಶೇಖರಿಸಲು ಈ ಕೆರೆ ನಿರ್ಮಾಣ ಪದ್ದತಿಯನ್ನು ಸಾವಿರಾರು ವರ್ಷಗಳ ಹಿಂದೆ ಜಾರಿಗೆ ತರಲಾಗಿದೆ. ಕೆರೆಯಲ್ಲಿ ನೀರು ಬತ್ತಿದೆ ಎಂದು ಹೇಳಿ ಅವುಗಳನ್ನು ಮುಚ್ಚಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ಹೇಳುವುದು ಸಚಿವರ ಅಜ್ಞಾನತನ ತೋರಿಸುತ್ತದೆ” ಎಂದರು.

ವಸತಿ ಸಚಿವ ವಿ. ಸೋಮಣ್ಣ ಅವರು ವಿಧಾನಸಭಾ ಅಧಿವೇಶನದಲ್ಲಿ ಬುಧವಾರ (ಫೆ.22)ದಂದು ಮಾತನಾಡುತ್ತಾ, “ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದು 52 ಸಾವಿರ ಮನೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ಬಡಜನರಿಗೆ ಮನೆ ನಿರ್ಮಾಣ ಮಾಡಿಕೊಡುವ ವಿಚಾರವಾಗಿ ಕಾಂಗ್ರೆಸ್‌ನ ಕೆ. ಅಬ್ದುಲ್‌ ಜಬ್ಬಾರ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರು ಕೇಳಿದ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ಸೋಮಣ್ಣ, ”ಸರ್ಕಾರದಿಂದ ವಸತಿ ಸಮುಚ್ಚಯ ನಿರ್ಮಾಣ ಮಾಡಲು ಸ್ಥಳೀಯವಾಗಿ ಲಭ್ಯವಿರುವ ಹಾಗೂ ವಸತಿ ಯೋಗ್ಯವಾಗಿರುವ ಸರ್ಕಾರಿ ಜಮೀನುಗಳನ್ನು ಉಚಿತವಾಗಿ ಮನೆ ನಿರ್ಮಾಣ ಯೋಜನೆಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ 493 ನಿರ್ಜೀವ ಕೆರೆಗಳನ್ನು ವಶಕ್ಕೆ ಪಡೆದುಕೊಂಡು ಮನೆ ನಿರ್ಮಾಣ ಮಾಡುತ್ತೇವೆ” ಎಂದಿದ್ದರು.

ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ಸಾವಿರಾರು ಕೆರೆಗಳನ್ನು ಮುಚ್ಚಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಈ ಕೆರೆಗಳ ಒತ್ತುವರಿಯಿಂದ ಇನ್ನು ಪ್ರತಿ ವರ್ಷ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದು ಹೋಗಲಾರದೆ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಈ ಬಗ್ಗೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಕೆರೆ ಕಾಲುವೆಗಳನ್ನು ಮುಚ್ಚಿ ಕಟ್ಟಡ ನಿರ್ಮಾಣ ಮಾಡಬಾರದು ಎಂದು ಹೇಳಿದೆ. ಇಂತಹ ಸಂದರ್ಭದಲ್ಲಿ ಸೋಮಣ್ಣನವರು ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ಕೆರೆ ಪ್ರದೇಶದಲ್ಲಿ ನಿರ್ಮಾಣ ನ್ಯಾಯಾಂಗ ನಿಂದನೆಯಾಗಿದೆ – ಲಿಯೋ ಸಾಲ್ಡಾನ

ಕೆರೆಗಳು ಅಂದರೆ 12 ತಿಂಗಳು ನೀರು ಇರಬೇಕಂತ ಏನಿಲ್ಲ ಎಂದು ಹೈಕೋರ್ಟ್‌ ಹೇಳುತ್ತದೆ. ಕಳೆದ ವರ್ಷ ನಾವು ಪಾವಗಡಕ್ಕೆ ಹೋದಾಗ ಅಲ್ಲಿಯ ಕೆರೆಯು ಹತ್ತಾರು ವರ್ಷಗಳಿಂದ ನೀರಿಲ್ಲದೇ ಖಾಲಿ ಇತ್ತು. ಆದರೆ ಇದೀಗ ಆ ಕೆರೆಗಳಲ್ಲಿ ನೀರು ತುಂಬಿ ಕೋಡಿ ಹರಿದಿದೆ. ನೀರಿಲ್ಲದ ಕೆರೆಗಳನ್ನೆಲ್ಲಾ ಮುಚ್ಚಿ ಮನೆ ಮಾಡುವುದಾದರೆ ಈ ಸಂದರ್ಭದಲ್ಲಿ ನಿಮಗೆ ಸಾವಿರಾರು ಕೆರೆಗಳು ಸಿಗಬಹುದು. ಹಾಗಂತ ಅವುಗಳನ್ನ ಮುಚ್ಚಿ ಮನೆ ನಿರ್ಮಾಣ ಮಾಡುವ ನಿಮ್ಮ ನಿರ್ಧಾರ ಸರಿಯಾದುದಲ್ಲ” ಎಂದು ಲಿಯೋ ಸಾಲ್ಡಾನ ಹೇಳಿದರು.

”ಬಡವರಿಗೆ ಮನೆ ನಿರ್ಮಾಣ ಮಾಡುವ ಯೋಜನೆಗಳು ಒಳ್ಳೆಯದ್ದು. ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ ಕೆರೆಗಳನ್ನು ಮುಚ್ಚುವುದನ್ನು ವಿರೋಧ ಮಾಡುತ್ತೇವೆ. ನಗರದ ಹಲವೆಡೆ ಶ್ರೀಮಂತರಿಗೆ ಲೇಔಟ್ ನಿರ್ಮಾಣ ಮಾಡಿಕೊಡುವ ಬದಲಿಗೆ ಆ ಸ್ಥಳಗಳಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡಿಕೊಡಿ” ಎಂದರು.

”ಕೆರೆ ಇರುವ ಜಾಗದಲ್ಲಿ ಮನೆ ನಿರ್ಮಾಣ ಮಾಡಬೇಡಿ ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸಚಿವರಿಗೆ ಅದು ಗೊತ್ತಿಲ್ವಾ? ಅಥವಾ ಇದು ಚುನಾವಣಾ ಪ್ರಚಾರದ ಗಿಮಿಕ್ ಆಗಿರಬಹುದೆ ಎಂದು ಅರ್ಥ ಆಗತಿಲ್ಲ. ಕೆರೆಗಳಲ್ಲಿ ಮನೆ ಕಟ್ಟುತ್ತೇನೆ ಎಂದು ಸಚಿವರು ಹೇಳುವುದಾದರೆ ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಗೊತ್ತಿಲ್ವಾ? ಅವರು ಸಚಿವ ಸೋಮಣ್ಣ ಅವರಿಗೆ ಹೇಳಬೇಕಿತ್ತು. ಬೇರೆಯವರಿಗೆ ಒಂದು ಕಾನೂನು ಬಿಜೆಪಿಗೆ ಒಂದು ಕಾನೂನಾ? ಎಂದು ಅವರು ಪ್ರಶ್ನಿಸಿದರು.

ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಕೂಡ ವಿರೋಧ ವ್ಯಕ್ತಪಡಿಸಿದೆ. “ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಾದ ಸರ್ಕಾರ, ಮಣ್ಣು ಮುಚ್ಚಿ ಮನೆ ಕಟ್ಟಲು ಹೊರಟಿರುವುದು ಅಕ್ಷಮ್ಯ. ನೀರಿನ ಮೂಲಸೆಲೆಗಳಾಗಿರುವ ಕೆರೆಗಳನ್ನು ಉಳಿಸಲು ಹೂಳು ಎತ್ತಲು ಕ್ರಮ ಕೈಗೊಳ್ಳಬೇಕೇ ಹೊರತು ಕೆರೆಗಳನ್ನು ಸರ್ವನಾಶ ಮಾಡುವುದಲ್ಲ. ರಾಜ್ಯ ಬಿಜೆಪಿ ಸರ್ಕಾರ ಕೆರೆ ಕಳ್ಳತನಕ್ಕೆ ಇಳಿದಿರುವುದೇಕೆ? ಸರ್ಕಾರ ಕೂಡಲೇ ಈ ಯೋಜನೆ ಹಿಂಪಡೆಯಬೇಕು” ಎಂದು ಟ್ವೀಟ್ ಮಾಡಿದೆ.

 

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆ ಜಾಗಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ಮಂಜೂರು ಮಾಡಲಾಗಿದೆ. 1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್‌ರವರು 2022ರ ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆದರೆ ಈಗ ಅದೇ ಪಕ್ಷದ ಸಚಿವರು ಕೆರೆಗಳ ಜಾಗದಲ್ಲಿ ಮನೆ ನಿರ್ಮಿಸುತ್ತೇವೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...