Homeಮುಖಪುಟಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಮತ್ತೊಮ್ಮೆ ರಾಜ್ಯ ಸರ್ಕಾರ ಬಿಲ್ಡರ್‌ಗಳ ಲಾಬಿಗೆ ಮಣಿದು ಕಾರ್ಮಿಕರ ನೆಮ್ಮದಿಗಿಂತ ರಿಯಲ್‌ ಎಸ್ಟೇಟ್‌ ಧಣಿಗಳ ಹಿತಕ್ಕೆ ಜೋತುಬಿದ್ದಿದೆ. ಹಾಗಾಗಿ ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದಾರೆ.

ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವ ಸುತ್ತೋಲೆಯಲ್ಲಿ ಬುಧವಾರ ಬೆಳಗ್ಗೆ 09 ಗಂಟೆಗೆ ಮತ್ತು ಮಧ್ಯಾಹ್ನ 12 ಗಂಟೆಗೆ ಹೊರಬೇಕಿದ್ದ ರೈಲುಗಳನ್ನು ಓಡಿಸದಿರಲು ಸೂಚಿಸಿದ್ದು, ಕಾರಣವನ್ನು ನೀಡಿಲ್ಲ.

ಆದರೆ ಅದಕ್ಕೆ ಕಾರಣ ಮಾತ್ರ ಸ್ಪಷ್ಟವಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರೆಲ್ಲರೂ ತಮ್ಮ ರಾಜ್ಯಗಳಿಗ ಹೊರಟುಹೋದರೆ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕೆಲಸಕ್ಕೆ ಹೊಡೆತುಬೀಳುತ್ತದೆ. ಹಾಗಾಗಿ ರೈಲುಗಳೇ ಹೊರಡಿದಿದ್ದರೆ ಕಾರ್ಮಿಕರು ಇಲ್ಲೇ ಉಳಿಯುವುದರಿಂದ ಕೆಲಸ ಸಾಧ್ಯ ಎಂದು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಅನ್ಯ ರಾಜ್ಯಗಳಿಗೆ ಉದ್ಯೋಗ ಹುಡುಕಿಕೊಂಡು ವಲಸೆ ಹೋಗಿದ್ದ ಕಾರ್ಮಿಕರ ಅವರ ತವರು ರಾಜ್ಯಗಳಿಗೆ ತಲುಪಿಸಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದರಂತೆ ಕರ್ನಾಟಕದಿಂದ ವಿವಿಧ ರಾಜ್ಯಗಳಿಗೆ ಪ್ರತಿ ದಿನ 2 ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿತ್ತು. ಕಳೆದ ಎರಡು ದಿನ 04 ರೈಲುಗಳು ನೆರೆಯ ರಾಜ್ಯಗಳಿಗೆ ಸಂಚಾರ ಆರಂಭಿಸಿವೆ. ಮಂಗಳವಾರ ಬೆಂಗಳೂರಿನ ಚಿಕ್ಕಬಾಣಾವರ ಜಂಕ್ಷನ್‌ನಿಂದ ಜೈಪುರಕ್ಕೆ ವಿಶೇಷ ರೈಲು ಹೊರಟಿದೆ.

ಆದರೆ, ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ರೈಲುಗಳ ಸಂಚಾರಕ್ಕೆ ತಡೆ ನೀಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

ಕಾರ್ಮಿಕರು ತಮ್ಮ ಊರುಗಳಿಗೆ ಸೇರಿದರೆ, ಕಟ್ಟಡ ನಿರ್ಮಾಣದಂತಹ ಕಾಮಗಾರಿಗಳಿಗೆ ಕೂಲಿ ಕೆಲಸ ಮಾಡಲು ಕಾರ್ಮಿಕರು ಸಿಗುವುದಿಲ್ಲ. ಇದರಿಂದಾಗಿ ರಿಯಲ್‌ ಎಸ್ಟೇಟ್‌ ಖೂಳರ ಕೆಲಸಗಳು ನಿಂತು ಹೋಗುತ್ತವೆ ಎಂಬ ಕಾರಣಕ್ಕಾಗಿ ಕಾರ್ಮಿಕರು ಹೊರಗೆ ಹೋಗದಂತೆ ತಡೆಯುವ ಸಂಚು ಇದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ಊಟ ಸಿಗುತ್ತಿದೆಯೇ, ಅವರಿಗೆ ಸಂಬಳ ಹೋಗುತ್ತಿದೆಯೇ ಎಂಬುದರ ಬಗ್ಗೆ ಕಿಂಚಿತ್ತೂ ಯೋಚಿಸದೇ ತಮ್ಮ ಪಾಡಿಗೆ ಇದ್ದ ಬಿಲ್ಡರ್‌ಗಳು ಈಗ ಕಾರ್ಮಿಕರು ತಮ್ಮ ಊರುಗಳಿಗೆ ಹೊರಟುನಿಂತ ಸಂದರ್ಭದಲ್ಲಿ ಅದನ್ನು ತಡೆಯುತ್ತಿರುವುದು ಅಮಾನವೀಯ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಜಾರ್ಖಂಡ್‌ನ ಜಾರ್ಖಂಡ್‌ ಆರ್ಗನೈಸೇಷನ್‌ ಆಫ್‌ ಹ್ಯೂಮನ್ ರೈಟ್ಸ್‌ (Johar) ಸಂಘಟನೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ಕೇವಲ ನಾಲ್ಕು ಗಂಟೆಗಳ ಅವದಿ ಕಾಲಾವಕಾಶ ನೀಡಿ ಲಾಕ್‌ಡೌನ್‌ ಮಾಡಿ ಕಾರ್ಮಿಕರನ್ನು ನಿರ್ಗತಿರನ್ನಾಗಿಸಿದ್ದ ಸರ್ಕಾರ, ಈಗ ಕಾರ್ಪೋರೇಟ್‌ ಲಾಬಿಗೆ ಮಣಿದು ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....