Homeಮುಖಪುಟಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಬಿಲ್ಡರ್‌ ಲಾಬಿಗೆ ಮಣಿದು ರೈಲುಸೇವೆ ರದ್ದುಗೊಳಿಸಿದ ರಾಜ್ಯಸರ್ಕಾರ: ಸಂಕಷ್ಟದಲ್ಲಿ ಕಾರ್ಮಿಕರು

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

- Advertisement -
- Advertisement -

ಮತ್ತೊಮ್ಮೆ ರಾಜ್ಯ ಸರ್ಕಾರ ಬಿಲ್ಡರ್‌ಗಳ ಲಾಬಿಗೆ ಮಣಿದು ಕಾರ್ಮಿಕರ ನೆಮ್ಮದಿಗಿಂತ ರಿಯಲ್‌ ಎಸ್ಟೇಟ್‌ ಧಣಿಗಳ ಹಿತಕ್ಕೆ ಜೋತುಬಿದ್ದಿದೆ. ಹಾಗಾಗಿ ಬುಧವಾರ ಬೆಂಗಳೂರಿನಿಂದ ಧಾನ್‌ಪುರ ಮತ್ತು ಬಿಹಾರಕ್ಕೆ ಹೊರಡಬೇಕಿದ್ದ ರೈಲುಗಳ ಸಂಚಾರವನ್ನು ರದ್ದುಗೊಳಿಸುವಂತೆ ಆದೇಶಿಸಿ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್‌ ಪ್ರಸಾದ್‌ ಸುತ್ತೋಲೆ ಹೊರಡಿಸಿದ್ದಾರೆ.

ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವ ಸುತ್ತೋಲೆಯಲ್ಲಿ ಬುಧವಾರ ಬೆಳಗ್ಗೆ 09 ಗಂಟೆಗೆ ಮತ್ತು ಮಧ್ಯಾಹ್ನ 12 ಗಂಟೆಗೆ ಹೊರಬೇಕಿದ್ದ ರೈಲುಗಳನ್ನು ಓಡಿಸದಿರಲು ಸೂಚಿಸಿದ್ದು, ಕಾರಣವನ್ನು ನೀಡಿಲ್ಲ.

ಆದರೆ ಅದಕ್ಕೆ ಕಾರಣ ಮಾತ್ರ ಸ್ಪಷ್ಟವಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರೆಲ್ಲರೂ ತಮ್ಮ ರಾಜ್ಯಗಳಿಗ ಹೊರಟುಹೋದರೆ ಬೆಂಗಳೂರಿನ ರಿಯಲ್‌ ಎಸ್ಟೇಟ್‌ ಕೆಲಸಕ್ಕೆ ಹೊಡೆತುಬೀಳುತ್ತದೆ. ಹಾಗಾಗಿ ರೈಲುಗಳೇ ಹೊರಡಿದಿದ್ದರೆ ಕಾರ್ಮಿಕರು ಇಲ್ಲೇ ಉಳಿಯುವುದರಿಂದ ಕೆಲಸ ಸಾಧ್ಯ ಎಂದು ಸರ್ಕಾರದ ಮೇಲೆ ಒತ್ತಡ ತಂದಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಅನ್ಯ ರಾಜ್ಯಗಳಿಗೆ ಉದ್ಯೋಗ ಹುಡುಕಿಕೊಂಡು ವಲಸೆ ಹೋಗಿದ್ದ ಕಾರ್ಮಿಕರ ಅವರ ತವರು ರಾಜ್ಯಗಳಿಗೆ ತಲುಪಿಸಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ಆದೇಶಿಸಿತ್ತು. ಇದರಂತೆ ಕರ್ನಾಟಕದಿಂದ ವಿವಿಧ ರಾಜ್ಯಗಳಿಗೆ ಪ್ರತಿ ದಿನ 2 ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿತ್ತು. ಕಳೆದ ಎರಡು ದಿನ 04 ರೈಲುಗಳು ನೆರೆಯ ರಾಜ್ಯಗಳಿಗೆ ಸಂಚಾರ ಆರಂಭಿಸಿವೆ. ಮಂಗಳವಾರ ಬೆಂಗಳೂರಿನ ಚಿಕ್ಕಬಾಣಾವರ ಜಂಕ್ಷನ್‌ನಿಂದ ಜೈಪುರಕ್ಕೆ ವಿಶೇಷ ರೈಲು ಹೊರಟಿದೆ.

ಆದರೆ, ಇದ್ದಕ್ಕಿದ್ದಂತೆ ರಾಜ್ಯ ಸರ್ಕಾರ ರೈಲುಗಳ ಸಂಚಾರಕ್ಕೆ ತಡೆ ನೀಡಿದ್ದು, ಆಕ್ಷೇಪಕ್ಕೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೂ ಕಾರ್ಮಿಕರಿಗೆ ದುಪ್ಪಟ್ಟು ದರ ವಿಧಿಸಿದ್ದ ಸರ್ಕಾರ, ಈಗ ರೈಲುಗಳ ಸಂಚಾರವನ್ನೂ ತಡೆಹಿಡಿದಿದ್ದು, ಇದರ ಹಿಂದೆ  ರಿಯಲ್‌ ಎಸ್ಟೇಟ್‌ ಖೂಳರ ಲಾಬಿ ಇದೆ ಎಂದು ಹೇಳಲಾಗುತ್ತಿದೆ.

ಕಾರ್ಮಿಕರು ತಮ್ಮ ಊರುಗಳಿಗೆ ಸೇರಿದರೆ, ಕಟ್ಟಡ ನಿರ್ಮಾಣದಂತಹ ಕಾಮಗಾರಿಗಳಿಗೆ ಕೂಲಿ ಕೆಲಸ ಮಾಡಲು ಕಾರ್ಮಿಕರು ಸಿಗುವುದಿಲ್ಲ. ಇದರಿಂದಾಗಿ ರಿಯಲ್‌ ಎಸ್ಟೇಟ್‌ ಖೂಳರ ಕೆಲಸಗಳು ನಿಂತು ಹೋಗುತ್ತವೆ ಎಂಬ ಕಾರಣಕ್ಕಾಗಿ ಕಾರ್ಮಿಕರು ಹೊರಗೆ ಹೋಗದಂತೆ ತಡೆಯುವ ಸಂಚು ಇದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರಿಗೆ ಊಟ ಸಿಗುತ್ತಿದೆಯೇ, ಅವರಿಗೆ ಸಂಬಳ ಹೋಗುತ್ತಿದೆಯೇ ಎಂಬುದರ ಬಗ್ಗೆ ಕಿಂಚಿತ್ತೂ ಯೋಚಿಸದೇ ತಮ್ಮ ಪಾಡಿಗೆ ಇದ್ದ ಬಿಲ್ಡರ್‌ಗಳು ಈಗ ಕಾರ್ಮಿಕರು ತಮ್ಮ ಊರುಗಳಿಗೆ ಹೊರಟುನಿಂತ ಸಂದರ್ಭದಲ್ಲಿ ಅದನ್ನು ತಡೆಯುತ್ತಿರುವುದು ಅಮಾನವೀಯ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಜಾರ್ಖಂಡ್‌ನ ಜಾರ್ಖಂಡ್‌ ಆರ್ಗನೈಸೇಷನ್‌ ಆಫ್‌ ಹ್ಯೂಮನ್ ರೈಟ್ಸ್‌ (Johar) ಸಂಘಟನೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಒಟ್ಟಿನಲ್ಲಿ ಕೇವಲ ನಾಲ್ಕು ಗಂಟೆಗಳ ಅವದಿ ಕಾಲಾವಕಾಶ ನೀಡಿ ಲಾಕ್‌ಡೌನ್‌ ಮಾಡಿ ಕಾರ್ಮಿಕರನ್ನು ನಿರ್ಗತಿರನ್ನಾಗಿಸಿದ್ದ ಸರ್ಕಾರ, ಈಗ ಕಾರ್ಪೋರೇಟ್‌ ಲಾಬಿಗೆ ಮಣಿದು ಕಾರ್ಮಿಕರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.


ಇದನ್ನೂ ಓದಿ: 2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...