Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...