Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....