Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...