Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...