Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...