Homeಮುಖಪುಟಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

ಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

- Advertisement -
- Advertisement -

2018 ರಲ್ಲಿ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಲ್ಲಿ ಸಂಚು ರೂಪಿಸದ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಅವರಿಗೆ ಬುಲಂದ್‌ಶಹರ್ ಬಿಜೆಪಿ ಮುಖಂಡ ಅನಿಲ್ ಸಿಸೋಡಿಯಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ವಿವಾದ ಸೃಷ್ಠಿಸಿದ್ದಾರೆ.

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

ಜುಲೈ 14 ರಂದು “ಪ್ರಧಾನ್ ಮಂತ್ರಿ ಜನ್ ಕಲ್ಯಾಣ್‌ಕಾರಿ ಯೋಗಿ ಜಾಗೃತ ಅಭಿಯಾನ” ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಲಂದ್‌ಶಹರ್‌ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂಘಟನೆಯು ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡುವ ಉದ್ದೇಶ ಹೊಂದಿದ್ದು ಬಿಜೆಪಿಯ ಉನ್ನತ ನಾಯಕರನ್ನು ಅದರ ಮಾರ್ಗದರ್ಶಕರಾಗಿ ಹೊಂದಿದೆ ಎಂದು ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಕೊಂದ ಆರೋಪಿ ಶಿಖರ್ ಅಗರ್‌ವಾಲ್‌ಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂಬ ಪ್ರಮಾಣ ಪತ್ರವನ್ನು ಬಿಜೆಪಿ ಮುಖಂಡ ಹಸ್ತಾಂತರಿಸಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಲೆಗಾರರನ್ನು ಬಿಜೆಪಿ ಅಭಿನಂದಿಸುತ್ತದೆ ಎಂದು ಟೀಕಿಸಲಾಗಿದೆ.

2018 ರಲ್ಲಿ, ಅಕ್ರಮ ಗೋಹತ್ಯೆಯ ವದಂತಿಗಳ ಮೇಲೆ ಹಿಂಸಾಚಾರ ಭುಗಿಲೆದ್ದ ನಂತರ ಈ ಪ್ರದೇಶದಲ್ಲಿ ಶಾಂತತೆಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕೊಡಲಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರ ಎರಡು ಬೆರಳುಗಳನ್ನು ಕತ್ತರಿಸಿ ಪೊಲೀಸರ ತಲೆಗೆ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಕಳೆದ ವರ್ಷದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆತ ಜೈಲಿನಿಂದ ಹೊರಬಂದ ಸಂಧರ್ಭದಲ್ಲಿಯೂ ಸಹ ಯುವ ಬಿಜೆಪಿ ಘಟಕ ಸೇರಿದಂತೆ ಹಲವಾರು ಹಿಂದುತ್ವಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದ್ದರು.


ಇದನ್ನೂ ಓದಿ: ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ


ಈಗ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಸಿಸೋಡಿಯಾ “ಆ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಮುಖ್ಯ ಅತಿಥಿಯಾಗಿ ಮಾತ್ರ ಆಹ್ವಾನಿಸಲಾಗಿತ್ತು. ಇನ್ನು ಶಿಖರ್ ಅಗರ್ವಾಲ್‌ಗೂ ಬಿಜೆಪಿಗೂ ಕೂಡ ಸಂಬಂಧವಿಲ್ಲ. ನಾವು ಶುದ್ಧತೆಯ ರಾಜಕೀಯವನ್ನು ಮಾತ್ರ ಉತ್ತೇಜಿಸುತ್ತೇವೆ. ನಮ್ಮ ಮಾನದಂಡಗಳನ್ನು ಒಪ್ಪಿದವರೊಂದಿಗೆ ಮಾತ್ರ ಸಹಭಾಗಿತ್ವ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಶಿಖರ್ ಅಗರ್ವಾಲ್ ಮಾತನಾಡಿ “ಆರೋಪ ಮಾಡುವುದಕ್ಕೂ, ಪ್ರಕರಣವನ್ನು ಸಾಬೀತುಪಡಿಸುವುದಕ್ಕೂ ವ್ಯತ್ಯಾಸವಿದೆ. ನನ್ನ ಜೀವನದಲ್ಲಿ ನಾನು ಯಾವತ್ತೂ ತಪ್ಪು ಮಾಡಿಲ್ಲ” ಎಂದು ತಿಳಿಸಿದ್ದಾನೆ.


ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...