Homeಮುಖಪುಟಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

ಪೊಲೀಸ್ ಕೊಂದ ಆರೋಪಿಗೆ ವೇದಿಕೆಯಲ್ಲಿ ಪ್ರಮಾಣ ಪತ್ರ ನೀಡಿದ ಬಿಜೆಪಿ ಮುಖಂಡ: ವ್ಯಾಪಕ ಟೀಕೆ

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

- Advertisement -
- Advertisement -

2018 ರಲ್ಲಿ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಲ್ಲಿ ಸಂಚು ರೂಪಿಸದ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಅವರಿಗೆ ಬುಲಂದ್‌ಶಹರ್ ಬಿಜೆಪಿ ಮುಖಂಡ ಅನಿಲ್ ಸಿಸೋಡಿಯಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ವಿತರಿಸಿ ವಿವಾದ ಸೃಷ್ಠಿಸಿದ್ದಾರೆ.

2018 ರಲ್ಲಿ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದ ಗುಂಪುಥಳಿತ ಹಿಂಸಾಚಾರದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿದ್ದರು. ಈ ಪ್ರಕರಣದಲ್ಲಿ ಆಗಿನ ಬಿಜೆಪಿ ಯುವ ಘಟಕದ ಅಧ್ಯಕ್ಷನಾಗಿದ್ದ ಶಿಖರ್ ಅಗರ್‌ವಾಲ್ ಪ್ರಮುಖ ಆರೋಪಿಯಾಗಿದ್ದಾರೆ.

ಜುಲೈ 14 ರಂದು “ಪ್ರಧಾನ್ ಮಂತ್ರಿ ಜನ್ ಕಲ್ಯಾಣ್‌ಕಾರಿ ಯೋಗಿ ಜಾಗೃತ ಅಭಿಯಾನ” ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬುಲಂದ್‌ಶಹರ್‌ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂಘಟನೆಯು ದೇಶಾದ್ಯಂತ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡುವ ಉದ್ದೇಶ ಹೊಂದಿದ್ದು ಬಿಜೆಪಿಯ ಉನ್ನತ ನಾಯಕರನ್ನು ಅದರ ಮಾರ್ಗದರ್ಶಕರಾಗಿ ಹೊಂದಿದೆ ಎಂದು ತಿಳಿಸಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಕೊಂದ ಆರೋಪಿ ಶಿಖರ್ ಅಗರ್‌ವಾಲ್‌ಗೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂಬ ಪ್ರಮಾಣ ಪತ್ರವನ್ನು ಬಿಜೆಪಿ ಮುಖಂಡ ಹಸ್ತಾಂತರಿಸಿದ್ದಾರೆ. ಈ ಚಿತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೊಲೆಗಾರರನ್ನು ಬಿಜೆಪಿ ಅಭಿನಂದಿಸುತ್ತದೆ ಎಂದು ಟೀಕಿಸಲಾಗಿದೆ.

2018 ರಲ್ಲಿ, ಅಕ್ರಮ ಗೋಹತ್ಯೆಯ ವದಂತಿಗಳ ಮೇಲೆ ಹಿಂಸಾಚಾರ ಭುಗಿಲೆದ್ದ ನಂತರ ಈ ಪ್ರದೇಶದಲ್ಲಿ ಶಾಂತತೆಯನ್ನು ಪುನಃಸ್ಥಾಪಿಸಲು ಹೋದಾಗ ಸುಮಾರು 400 ಜನರ ಗುಂಪಿನಿಂದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಲಾಯಿತು. ಕೊಡಲಿಯಿಂದ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಅವರ ಎರಡು ಬೆರಳುಗಳನ್ನು ಕತ್ತರಿಸಿ ಪೊಲೀಸರ ತಲೆಗೆ ಹೊಡೆದು ಸಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್‌ವಾಲ್ ಕಳೆದ ವರ್ಷದ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆತ ಜೈಲಿನಿಂದ ಹೊರಬಂದ ಸಂಧರ್ಭದಲ್ಲಿಯೂ ಸಹ ಯುವ ಬಿಜೆಪಿ ಘಟಕ ಸೇರಿದಂತೆ ಹಲವಾರು ಹಿಂದುತ್ವಪರ ಕಾರ್ಯಕರ್ತರು ಹೂವಿನ ಹಾರ ಹಾಕಿ, ಜೈ ಶ್ರೀರಾಮ್ ಘೋಷಣೆ ಕೂಗಿ ಸಂಭ್ರಮಿಸಿದ್ದರು.


ಇದನ್ನೂ ಓದಿ: ಪೊಲೀಸ್ ಅಧಿಕಾರಿ ಕೊಂದ ಆರೋಪಿಗೆ ಹೂಮಾಲೆ ಹಾಕಿ ಭವ್ಯ ಸ್ವಾಗತ, ಜೈ ಶ್ರೀರಾಂ ಘೋಷಣೆಗಳ ಅಬ್ಬರ


ಈಗ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಸಿಸೋಡಿಯಾ “ಆ ಸಂಘಟನೆಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನನ್ನು ಮುಖ್ಯ ಅತಿಥಿಯಾಗಿ ಮಾತ್ರ ಆಹ್ವಾನಿಸಲಾಗಿತ್ತು. ಇನ್ನು ಶಿಖರ್ ಅಗರ್ವಾಲ್‌ಗೂ ಬಿಜೆಪಿಗೂ ಕೂಡ ಸಂಬಂಧವಿಲ್ಲ. ನಾವು ಶುದ್ಧತೆಯ ರಾಜಕೀಯವನ್ನು ಮಾತ್ರ ಉತ್ತೇಜಿಸುತ್ತೇವೆ. ನಮ್ಮ ಮಾನದಂಡಗಳನ್ನು ಒಪ್ಪಿದವರೊಂದಿಗೆ ಮಾತ್ರ ಸಹಭಾಗಿತ್ವ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.

ಶಿಖರ್ ಅಗರ್ವಾಲ್ ಮಾತನಾಡಿ “ಆರೋಪ ಮಾಡುವುದಕ್ಕೂ, ಪ್ರಕರಣವನ್ನು ಸಾಬೀತುಪಡಿಸುವುದಕ್ಕೂ ವ್ಯತ್ಯಾಸವಿದೆ. ನನ್ನ ಜೀವನದಲ್ಲಿ ನಾನು ಯಾವತ್ತೂ ತಪ್ಪು ಮಾಡಿಲ್ಲ” ಎಂದು ತಿಳಿಸಿದ್ದಾನೆ.


ವಾರಣಾಸಿ: ನೇಪಾಳಿ ಯುವಕನ ತಲೆ ಬೋಳಿಸಿ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿದ ಹಿಂದುತ್ವವಾದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...