Homeಮುಖಪುಟಸೆಂಟ್ರಲ್ ವಿಸ್ತಾ: ಭವನ ಪ್ರಜಾಪ್ರಭುತ್ವದ್ದು, ಭಾವನೆ ರಾಜಪ್ರಭುತ್ವದ್ದು

ಸೆಂಟ್ರಲ್ ವಿಸ್ತಾ: ಭವನ ಪ್ರಜಾಪ್ರಭುತ್ವದ್ದು, ಭಾವನೆ ರಾಜಪ್ರಭುತ್ವದ್ದು

- Advertisement -
- Advertisement -

“ಪ್ರಶ್ನೆ ಭವನದ್ದಲ್ಲ, ಭಾವನೆಯದ್ದು”. ನನಗೆ ಸಂಸತ್ತಿನ ಹೊಸ ಭವನದ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂದು ಕೇಳಿದಾಗ, ನನ್ನ ಗಂಟಲಿನಿಂದ ಹೊರಬಂದದ್ದು ಇದೊಂದೇ ಮಾತು.

ಭಾರತೀಯ ಸಂಸತ್ತಿಗೆ ಹೊಸದೊಂದು ಕಟ್ಟಡ ಬೇಕಿತ್ತೋ ಇಲ್ಲವೋ ಎಂಬುದು ಪ್ರಶ್ನೆ ಅಲ್ಲ. ಹಳೆಯ ಕಟ್ಟಡವು ಈಗ ಕಾರ್ಯ ನಿರ್ವಹಿಸಲು ಸೂಕ್ತವಾಗಿಲ್ಲ ಹಾಗೂ ಹೊಸ ಕಾಲದ ಅಗತ್ಯಗಳಿಗೆ ಅನುಗುಣವಾಗಿಲ್ಲ ಎಂದು ಹಲವಾರು ಸಂಸದರು ಹೇಳಿದ್ದರು. ನಾನಾದರೋ, ಈಗಲೂ ಮಿತವ್ಯಯಿ ಮನೋಭಾವದವನು, ಯಾವಾಗಲೂ ದುಂದುಗಾರಿಕೆ ತಪ್ಪಿಸಲು ಪ್ರಯತ್ನಿಸುತ್ತಿರುತ್ತೇನೆ. ಹಳೆಯ ಕಟ್ಟಡ ರಿಪೇರಿ ಮಾಡಿ ನವೀಕರಿಸಬಹುದಿತ್ತು ಎಂದು ನನಗೆ ಅನಿಸುತ್ತಿತ್ತು. ಹೇಗೂ ಬಡಜನರ ಈ ಪ್ರಜಾಪ್ರಭುತ್ವದ ಪ್ರತೀಕವಾಗಿ ಯಾವುದೇ ಒಂದು ಅತ್ಯಂತ ಭವ್ಯವಾದ ಕಟ್ಟಡ ಇರುವ ವಿಷಯವನ್ನು ಅರಗಿಸಿಕೊಳ್ಳುವುದು ಕಷ್ಟವೇ. ಆದರೆ ನಾನು ಎಂದೂ ಈ ಕಟ್ಟಡವನ್ನು ಬಳಸಿದವನಲ್ಲವಾದ್ದರಿಂದ, ಅಲ್ಲಿ ಪ್ರತಿದಿನ ಹೋಗುವ ಸಂಸದರ ಮಾತು ಸರಿ ಇರಬಹುದು. ಹೊಸದೊಂದು ಭವನವೊಂದೇ ಪರ್ಯಾಯವಾಗಿರಬಹುದು. ಮೊದಲಿನ ಭವನಕ್ಕಿಂತ ಈ ಹೊಸ ಭವನವೇ ಚೆನ್ನಾಗಿರಬಹುದು. ಇದು ನಿಸ್ಸಂಶಯವಾಗಿಯೂ ಸೌಲಭ್ಯಗಳು ಮತ್ತು ತಂತ್ರಜ್ಞಾನದೊಂದಿಗೆ ಸಜ್ಜಾಗಿರುತ್ತದೆ. ಆದರೆ ಇದು ಅಸಲಿ ಪ್ರಶ್ನೆಯಲ್ಲ. ಪ್ರಶ್ನೆ ಇರುವುದು, ಈ ಹೊಸ ಭವನ ಯಾವ ಭಾವನೆಯನ್ನು ಪ್ರತಿನಿಧಿಸುತ್ತಿದೆ ಎಂಬುದು.

ಸರಕಾರಿ ಮತ್ತು ಭಟ್ಟಂಗಿ ಜನರ ಮಾತು ಕೇಳಿದರೆ, ಸಂಸತ್ತಿನ ಈ ಹೊಸ ಭವನವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಶಕ್ತಿಯ ಭವ್ಯ ಪ್ರತೀಕವಾಗಿದೆ. ಸ್ವಾಭಾವಿಕವಾಗಿಯೇ ವಿರೋಧ ಪಕ್ಷಗಳು ಈ ಹೇಳಿಕೆಗಳನ್ನು ಒಪ್ಪುತ್ತಿಲ್ಲ. ಕಳೆದ 9 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾಧನೆಗಳು ಏನೇ ಇದ್ದರೂ, ಅವರ ಸಮರ್ಥಕರು ಕೂಡ ಮೋದಿಯವರು ಪ್ರಜಾಸತ್ತಾತ್ಮಕ ಪ್ರತಿಷ್ಠೆ ಮತ್ತು ಸಂಸದೀಯ ಪರಂಪರೆಗಳಿಗೆ ಗೌರವ ನೀಡಿದ್ದಾರೆ ಎಂದು ಹೇಳಲು ಸಂಕೋಚಪಟ್ಟುಕೊಳ್ಳುತ್ತಾರೆ. ಅವರ ಕಾರ್ಯಾವಧಿಯಲ್ಲಿ ಸಂಸತ್ತಿನ ಕಲಾಪಗಳ ಅವಧಿ ಕಿರಿದಾದವು, ಯಾವುದೇ ಚರ್ಚೆಯಿಲ್ಲದೇ ಜಾರಿಗೊಳಿಸಲಾದ ಕಾನೂನುಗಳ ಸಂಖ್ಯೆ ಹೆಚ್ಚಿತು. ಮೊದಲ ಬಾರಿ ರಾಜ್ಯಸಭೆಯಲ್ಲಿ ಮತದಾನ ಮಾಡದೇ ಕಾನೂನುಗಳನ್ನು ಜಾರಿಗೊಳಿಸಲಾಯಿತು. ಮೊದಲ ಬಾರಿ ಬಜೆಟ್ ಮತ್ತು ವಿತ್ತೀಯ ಮಸೂದೆಗಳ ನೆಪದಲ್ಲಿ ಸಾಮಾನ್ಯ ಕಾನೂನುಗಳನ್ನು ಮೇಲ್ಮನೆಯಿಂದ ಬೈಪಾಸ್ ಮಾಡಲಾಯಿತು. ಮೊದಲ ಬಾರಿ ವಿರೋಧ ಪಕ್ಷದ ನಾಯಕರು ಮಾತನಾಡುವ ಸಮಯದಲ್ಲಿ ಕ್ಯಾಮರಾಗಳನ್ನು ಬಂದ್ ಮಾಡಿಸಲಾಯಿತು, ಅವರ ಮೈಕ್‌ಗಳೂ ಬಂದ್ ಆದವು. ಮೊದಲ ಬಾರಿ ಆಡಳಿತಾರೂಢ ಪಕ್ಷವೇ ಹುಯಿಲೆಬ್ಬಿಸಿ ಸಂಸತ್ತಿನ ಕಾರ್ಯಕಲಾಪವನ್ನು ಬಂದ್ ಮಾಡಿಸಿತು. ಮೊದಲ ಬಾರಿ ವಿರೋಧ ಪಕ್ಷದ ಪ್ರಮುಖ ಸಂಸದನ ಸದಸ್ಯತ್ವ ರದ್ದುಪಡಿಸುವ ಆಟ ಆಡಲಾಯಿತು. ಹಾಗಾಗಿ, ಯಾವ ಸಂಸತ್ತಿನ ಹಿರಿಮೆ ಕುಸಿಯುತ್ತಿದೆಯೋ, ಅದಕ್ಕಾಗಿ ಭವ್ಯ ಭವನದ ನಿರ್ಮಾಣವು ಪ್ರಶ್ನೆಗಳನ್ನು ಹುಟ್ಟುಹಾಕುವುದು ಸ್ವಾಭಾವಿಕವಾಗಿದೆ.

ಭವನದ ಉದ್ಘಾಟನೆಯೊಂದಿಗೆ ಸಂಬಂಧಿಸಿದ ವಿವಾದವನ್ನು ಇದೇ ಬೆಳಕಿನಲ್ಲಿ ನೋಡಬೇಕಿದೆ. ಹಾಗೆ ನೋಡಿದರೆ, ಉದ್ಘಾಟನೆಯು ರಾಷ್ಟ್ರಪತಿಯ ಕೈಯಿಂದಲೇ ಆಗಬೇಕು ಎಂಬ ಕಡ್ಡಾಯವೇನಿಲ್ಲ. ಹಾಗೆಯೇ, 26ನೆಯ ಜನವರಿಯಂದು ನಡೆಯುವ ಪರೇಡ್‌ನ ಸಲಾಮಿ/ಗೌರವವಂದನೆ ರಾಷ್ಟ್ರಪತಿಗಳೇ ಸ್ವೀಕರಿಸಬೇಕು ಎಂತಲೂ ಎಲ್ಲಿಯೂ ಬರೆದಿಲ್ಲ. ಇವೆಲ್ಲ ಪ್ರಜಾಪ್ರಭುತ್ವದ ಸಂಪ್ರದಾಯಗಳು ಹಾಗೂ ನಿಸ್ಸಂದೇಹವಾಗಿ ಈ ಬಾರಿ ಆ ಗೌರವದ ಉಲ್ಲಂಘನೆಯಾಗಿದೆ. ವಿರೋಧ ಪಕ್ಷಗಳು ಈ ಉದ್ಘಾಟನಾ ಸಮಾರಂಭವನ್ನು ಬಾಯ್ಕಾಟ್ ಮಾಡುವ ನಿರ್ಧಾರವನ್ನು ಮುಂಚೆಯೇ ತೆಗೆದುಕೊಂಡಿರುವ ಸಾಧ್ಯತೆಯೂ ಇದೆ ಹಾಗೂ ಈ ತಾಂತ್ರಿಕ ಆಕ್ಷೇಪಣೆಯನ್ನೂ ಮಾಡಿರಬಹುದು; ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ನೂತನ ಸಂಸತ್ತಿನಲ್ಲಿ ನಡೆಯಲಿದ್ದ ಆಚರಣೆಗಳನ್ನು ತಮ್ಮ ವ್ಯಕ್ತಿಗತ ಇಮೇಜ್ ಕಟ್ಟಿಕೊಳ್ಳಲು ಬಳಸಲು ಬಯಸಿದ್ದರು ಹಾಗೂ ಆ ಫೋಟೋದಲ್ಲಿ ಅಥವಾ ಚಿತ್ರಣದಲ್ಲಿ ಬೇರೆ ಯಾರೂ, ಅವರು ಮಹಾಮಹಿಮ ರಾಷ್ಟ್ರಪತಿಯೇ ಆಗಿರಲಿ, ಯಾರೂ ಅಡ್ಡಬರುವುದು ಅವರಿಗೆ ಇಷ್ಟವಿರಲಿಲ್ಲ ಎಂಬುದೂ ನಿಚ್ಚಳ ಸತ್ಯ. ನಿನ್ನೆಯ ತನಕ ಯಾವ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯನ್ನು ಇಡೀ ದೇಶದ ಹೆಮ್ಮೆಯ ಪ್ರತೀಕ ಎಂದು ಬಿಂಬಿಸಲಾಗುತ್ತಿತ್ತೋ, ಅವರನ್ನು ಈ ಐತಿಹಾಸಿಕ ಸಂದರ್ಭದಲ್ಲಿ ಮೂಲೆಗುಂಪು ಮಾಡುವ ಈ ಕೆಲಸವು ಒಂದು ಪ್ರಶ್ನೆಯನ್ನು ಹುಟ್ಟುಹಾಕುತ್ತದೆ; ಈ ಸರಕಾರಕ್ಕೆ ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಿಂದ ಏನಾದರೂ ತೊಂದರೆ ಇದೆಯೇ?

ಇದನ್ನೂ ಓದಿ: ‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

ಈ ಸಮಾರಂಭಕ್ಕೆ ಸಂಬಂಧಿಸಿದ ಅನೇಕ ಪ್ರತೀಕಗಳು ಸರಕಾರದ ನಿಯತ್ತಿನ ಮೇಲೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ. ಇದನ್ನು ವಿನಾಯಕ ದಾಮೋದರ ಸಾವರ್ಕರ್‌ನ ಜನ್ಮದಿನ ಮೇ, 26ರಂದು ಆಯೋಜಿಸಿರುವುದು ಒಂದು ಆಳವಾದ ಸೂಚಕವಾಗಿದೆ. ನೆನಪಿಡಿ ಸಾವರ್ಕರ್ ಪ್ರಜಾಪ್ರಭುತ್ವದ ಬೆಂಬಲಿಗರಾಗಿದ್ದಿಲ್ಲ, ಅವರು ಹಿಟ್ಲರ್ ಮತ್ತು ಮುಸೊಲಿನಿಯ ಪ್ರಶಂಸಕರಾಗಿದ್ದರು. ಈ ಸಂದರ್ಭದಲ್ಲಿ ಧರ್ಮಗುರುಗಳ ಉಪಸ್ಥಿತಿ ಹಾಗೂ ಸ್ವಯಂ ಒಂದು ಧಾರ್ಮಿಕ ಸಮುದಾಯದ ಆಚರಣೆಯನ್ನು ಬಳಸಿರುವುದು ಭಾರತದ ಜಾತ್ಯತೀತ ಸ್ವರೂಪಕ್ಕೆ ಹೊಂದಿಕೆಯಾಗುವುದಿಲ್ಲ. ಸೆಂಗೋಲ್ ರೂಪದಲ್ಲಿರುವ ರಾಜದಂಡವನ್ನು ವಸ್ತುಸಂಗ್ರಹಾಲಯದಿಂದ ಹೊರತಂದು ಅದಕ್ಕೆ ಪೌರಾಣಿಕ ಮಹತ್ವ ನೀಡಿ, ಅದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯ ಕೈಗೆ ಅರ್ಪಿಸುವುದು, ಇವೆಲ್ಲ ಈ ಸಮಾರಂಭಕ್ಕೆ ರಾಜ್ಯಾಭಿಷೇಕದ ಸ್ವರೂಪ ನೀಡುತ್ತವೆ, ಪ್ರಜಾಪ್ರಭುತ್ವದ ಬದಲಿಗೆ ರಾಜತಂತ್ರದ ಇಮೇಜ್ ಸೃಷ್ಟಿಸುತ್ತವೆ.

ಒಂದು ವೇಳೆ ಮೇ 28ರಂದು ಘಟಿಸಿದ ಈ ಅಪೂರ್ವ ಘಟನೆಯ ಭಾವನೆಯನ್ನು ತಿಳಿದುಕೊಳ್ಳುವಲ್ಲಿ ಇನ್ನೂ ಯಾವುದೇ ಸಂದೇಹ ಬಾಕಿ ಇದ್ದರೆ, ಅದನ್ನು ಮಹಿಳಾ ಕುಸ್ತಿಪಟುಗಳೊಂದಿಗೆ ಆದ ಅನುಚಿತ ವರ್ತನೆಯು ಪೂರ್ಣಗೊಳಿಸಿತು. ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವದ ಜೀವವಿದ್ದಂತೆ. ಪ್ರಜಾಪ್ರಭುತ್ವದ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಆ ಮಂದಿರವನ್ನು ಮೈಲಿಗೆ ಮಾಡಿದಂತೆ. ಇಂತಹ ಅನುಚಿತ ವರ್ತನೆ ಯಾವ ಪ್ರಜೆಯೊಂದಿಗೂ ಆಗಬಾರದಿತ್ತು, ಆದರೆ ರಾಷ್ಟ್ರೀಯ ಹೆಮ್ಮೆಯ ಪ್ರತೀಕವಾದ ಇಂತಹ ಒಲಿಂಪಿಕ್ ಆಟಗಾರರೊಂದಿಗೆ ಹೀಗೆ ಮಾಡುವುದು ಅಧಿಕಾರದ ನಿರಂಕುಶತೆಯನ್ನು ಪರಿಚಯಿಸುತ್ತದೆ. ಅದೂ ಕೂಡ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಒಬ್ಬ ನಾಯಕನನ್ನು ಉಳಿಸಲು. ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ಚಿತ್ರಣಗಳು ವಿಶ್ವದಾದ್ಯಂತ ಭಾರತೀಯ ಪ್ರಜಾಪ್ರಭುತ್ವದ ಹೆಸರನ್ನು ಕಳಂಕಿತಗೊಳಿಸಿವೆ.

ದುರಹಂಕಾರಿ ಸರ್ವಾಧಿಕಾರಿಗಳು ವಿರಾಟವಾದ ಸ್ಮಾರಕ ಮತ್ತು ಭವ್ಯ ಭವನಗಳನ್ನು ನಿರ್ಮಿಸುವ ಶೋಕಿ ಹೊಂದಿರುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಯಾವ ಸಂಸದರು ಕೇವಲ ರಬ್ಬರ್ ಸ್ಟಾಂಪ್ ಆಗಿರುತ್ತಾರೋ, ಸಾಮಾನ್ಯವಾಗಿ ಅವರ ಭವನಗಳೂ ತುಂಬಾ ಭವ್ಯವಾಗಿರುತ್ತವೆ. ಆದರೆ ಇತಿಹಾಸ ಮತ್ತೊಂದನ್ನೂ ನೆನಪಿಸುತ್ತದೆ, ಕೊನೆಯಲ್ಲಿ ಜನರ ಭಾವನೆಗಳು ಆಡಳಿತದಲ್ಲಿರುವವರ ಭಾವನೆಗಳಿಗಿಂತಲೂ ಪ್ರಬಲವೆಂದು ಸಾಬೀತಾಗಿದೆ ಎಂದು. ಒಂದು ವೇಳೆ ಭಾರತೀಯ ಪ್ರಜಾಪ್ರಭುತ್ವವು ಬ್ರಿಟಿಷರಿಂದ ನಿರ್ಮಿಸಲಾದ ಸಂಸತ್ತಿನ ಭವನವನ್ನು ಪ್ರಜಾಸತ್ತಾತ್ಮಕ ಭಾವನೆಗಳಿಂದ ತುಂಬಿಸಲು ಸಾಧ್ಯವಾಗಿದೆಯೆಂದರೆ, ಸಂಸತ್ತಿನ ಹೊಸ ಭವನದ ಮೇಲೆ ಸ್ಥಾಪಿಸಲಾಗಿರುವ ಇಂದಿನ ಆಡಳಿತಗಾರರ ಭಾವನೆ ಹೆಚ್ಚು ಕಾಲ ಉಳಿಯುವುದಿಲ್ಲ ಎಂಬುದರ ಮೇಲೆಯೂ ಭರವಸೆ ಇರಿಸಬೇಕಾಗುತ್ತದೆ. ನಿರಂಕುಶ ಆಡಳಿತದ ಉದ್ದೇಶಗಳನ್ನು ಸೋಲಿಸಿ ಪ್ರಜಾಪ್ರಭುತ್ವ ಗೆಲ್ಲಲಿದೆ.

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...