Homeಮುಖಪುಟಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ ರ್ಯಾಟ್‌ ಕಾರ್ಯಾಚರಣೆಯ(Rat Miner) ಭಾಗವಾಗಿದ್ದ ವಕೀಲ್‌ ಹಸನ್‌ ಅವರ ಮನೆಯನ್ನು ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಬುಧವಾರ ಬೆಳಿಗ್ಗೆ ನೆಲಸಮಗೊಳಿಸಿದೆ.

ಈಶಾನ್ಯ ದಿಲ್ಲಿಯ ಖಜೂರಿ ಖಸ್‌ ಗ್ರಾಮದಲ್ಲಿ ಜಮೀನಿನ ಒತ್ತುವರಿ ಆರೋಪದಲ್ಲಿ ವಕೀಲ್‌ ಹಸನ್‌ ಅವರ ಮನೆಯನ್ನು ತೆರವುಗೊಳಿಸಲಾಗಿದೆ. ಈ ಜಮೀನು ಸರಕಾರಿ ಜಮೀನು ಎಂದು ಡಿಡಿಎ ಹೇಳಿಕೊಂಡಿದೆ.

ಈ ಕುರಿತು ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಹಸನ್‌ ಅವರು, ಮನೆ ನೆಲಸಮಗೊಳಿಸುವ ಕುರಿತಂತೆ ಯಾವುದೇ ನೋಟಿಸ್‌ ದೊರೆತಿಲ್ಲ. ಸಕ್ರಮ ಕಾಲನಿಯಲ್ಲಿ ನಾವು ವಾಸಿಸುತ್ತಿದ್ದೇವೆ. 2012-13ರಲ್ಲಿ ನನ್ನ ಮನೆ ನಿರ್ಮಿಸಿದ್ದೆ. ತೆರವು ವೇಳೆ ನಾನು ಮತ್ತು ನನ್ನ ಪತ್ನಿ ಮನೆಯಲ್ಲಿರಲಿಲ್ಲ. ಡಿಡಿಎ ಅಧಿಕಾರಿಗಳು ಬರುವಾಗ ನಮ್ಮ ಮೂವರು ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವರಿಗೆ ತೆರವು ಕಾರ್ಯಾಚರಣೆ ವೇಳೆ ತೊಂದರೆಯಾಗಿದೆ. ಈಗ ಎಲ್ಲಿಗೆ ಹೋಗುವುದೆಂದು ತಿಳಿದಿಲ್ಲ. ನಾನು ಮನೆಯತ್ತ ಬಂದಾಗ ಹತ್ತಿರದ ಠಾಣೆಗೆ ನನ್ನನ್ನು ಕರೆದೊಯ್ಯಲಾಯಿತು. ಅಲ್ಲಿ ನನ್ನ ಫೋನ್‌ ವಶಪಡಿಸಿಕೊಂಡಿದ್ದಾರೆ. ಬಾಡಿಗೆಗೆ ಮನೆ ಕೂಡ ಈಗ ದೊರೆಯುತ್ತಿಲ್ಲ ಎಂದು ಹಸನ್‌ ಹೇಳಿಕೊಂಡಿದ್ದಾರೆ.

ಮನೆ ಕೆಡವುವ ಮುನ್ನ ಡಿಡಿಎ ಯಾವುದೇ ನೋಟಿಸ್ ನೀಡಿಲ್ಲ. ನನ್ನ ಮನೆಯನ್ನು ಮಾತ್ರ ನಾನು ಬಹುಮಾನವಾಗಿ ಕೇಳಿದ್ದೆ, ಆದರೆ ಡಿಡಿಎ ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದೆ, ಆದರೆ ಈ ಮೊದಲು ಮನೆಯನ್ನು ಮುಟ್ಟುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು ಎಂದು ಅವರು ಹೇಳಿದರು.

ಈಶಾನ್ಯ ದೆಹಲಿ ಸಂಸದ ಮನೋಜ್‌ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಹಸನ್‌ ಅವರಿಗೆ ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡುವುದಾಗಿ ತಿಳಿಸಿದ್ದಾರೆ.

ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ ಅವರು ಹಸನ್‌ ಮನೆ ಧ್ವಂಸವನ್ನು ದುರಂತ ಮತ್ತು ನಾಚಿಕೆಗೇಡು ಎಂದು ಬಣ್ಣಿಸಿದ್ದಾರೆ. ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ತನ್ನ ತಂಡದೊಂದಿಗೆ ರಕ್ಷಿಸಿದ ಧೀರ ವಕೀಲ್ ಹಾಸನ್ ಅವರ ಮನೆಯನ್ನು ಕೆಡವಲಾಗಿದೆ. ಒಮ್ಮೆ ಹೀರೋ ಆಗಿದ್ದವರು ಇಂದು ನಿರಾಶ್ರಿತರಾಗಿದ್ದಾರೆ. ನಮ್ಮ ಧೈರ್ಯಶಾಲಿ ನಾಗರಿಕರಿಗೆ ನಾವು ಈ ರೀತಿ ಪ್ರತಿಫಲ ನೀಡುವುದಾ ಎಂದು ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ ನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15ರಂದು ಕುಸಿದ ಸುರಂಗದಿಂದ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲಾ ಪ್ರಯತ್ನಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡದಿದ್ದಾಗ ಹಸನ್‌ ಅವರ ರ್ಯಾಟ್‌ ಕಾರ್ಯಾಚರಣೆಯ  ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಯಿತು. ಅವರ ತಂಡವು ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿತ್ತು. ತಮ್ಮ ಅಮೋಘ ಕಾರ್ಯಾಚರಣೆಗೆ  ಉತ್ತರಾಖಂಡ ಮುಖ್ಯಮಂತ್ರಿ ಘೋಷಿಸಿದ ಪರಿಹಾರ ಮೊತ್ತವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದರು.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...