Homeಮುಖಪುಟಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದ ವಕೀಲ್‌ ಹಸನ್‌ ನಿವಾಸವನ್ನು ಕೆಡವಿದ ಸ್ಥಳೀಯಾಡಳಿತ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವ ಉಳಿಸಿದ ರ್ಯಾಟ್‌ ಕಾರ್ಯಾಚರಣೆಯ(Rat Miner) ಭಾಗವಾಗಿದ್ದ ವಕೀಲ್‌ ಹಸನ್‌ ಅವರ ಮನೆಯನ್ನು ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಬುಧವಾರ ಬೆಳಿಗ್ಗೆ ನೆಲಸಮಗೊಳಿಸಿದೆ.

ಈಶಾನ್ಯ ದಿಲ್ಲಿಯ ಖಜೂರಿ ಖಸ್‌ ಗ್ರಾಮದಲ್ಲಿ ಜಮೀನಿನ ಒತ್ತುವರಿ ಆರೋಪದಲ್ಲಿ ವಕೀಲ್‌ ಹಸನ್‌ ಅವರ ಮನೆಯನ್ನು ತೆರವುಗೊಳಿಸಲಾಗಿದೆ. ಈ ಜಮೀನು ಸರಕಾರಿ ಜಮೀನು ಎಂದು ಡಿಡಿಎ ಹೇಳಿಕೊಂಡಿದೆ.

ಈ ಕುರಿತು ಮಾದ್ಯಮಗಳಿಗೆ ಹೇಳಿಕೆ ನೀಡಿರುವ ಹಸನ್‌ ಅವರು, ಮನೆ ನೆಲಸಮಗೊಳಿಸುವ ಕುರಿತಂತೆ ಯಾವುದೇ ನೋಟಿಸ್‌ ದೊರೆತಿಲ್ಲ. ಸಕ್ರಮ ಕಾಲನಿಯಲ್ಲಿ ನಾವು ವಾಸಿಸುತ್ತಿದ್ದೇವೆ. 2012-13ರಲ್ಲಿ ನನ್ನ ಮನೆ ನಿರ್ಮಿಸಿದ್ದೆ. ತೆರವು ವೇಳೆ ನಾನು ಮತ್ತು ನನ್ನ ಪತ್ನಿ ಮನೆಯಲ್ಲಿರಲಿಲ್ಲ. ಡಿಡಿಎ ಅಧಿಕಾರಿಗಳು ಬರುವಾಗ ನಮ್ಮ ಮೂವರು ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವರಿಗೆ ತೆರವು ಕಾರ್ಯಾಚರಣೆ ವೇಳೆ ತೊಂದರೆಯಾಗಿದೆ. ಈಗ ಎಲ್ಲಿಗೆ ಹೋಗುವುದೆಂದು ತಿಳಿದಿಲ್ಲ. ನಾನು ಮನೆಯತ್ತ ಬಂದಾಗ ಹತ್ತಿರದ ಠಾಣೆಗೆ ನನ್ನನ್ನು ಕರೆದೊಯ್ಯಲಾಯಿತು. ಅಲ್ಲಿ ನನ್ನ ಫೋನ್‌ ವಶಪಡಿಸಿಕೊಂಡಿದ್ದಾರೆ. ಬಾಡಿಗೆಗೆ ಮನೆ ಕೂಡ ಈಗ ದೊರೆಯುತ್ತಿಲ್ಲ ಎಂದು ಹಸನ್‌ ಹೇಳಿಕೊಂಡಿದ್ದಾರೆ.

ಮನೆ ಕೆಡವುವ ಮುನ್ನ ಡಿಡಿಎ ಯಾವುದೇ ನೋಟಿಸ್ ನೀಡಿಲ್ಲ. ನನ್ನ ಮನೆಯನ್ನು ಮಾತ್ರ ನಾನು ಬಹುಮಾನವಾಗಿ ಕೇಳಿದ್ದೆ, ಆದರೆ ಡಿಡಿಎ ಯಾವುದೇ ಸೂಚನೆ ನೀಡದೆ ನನ್ನ ಮನೆಯನ್ನು ಕೆಡವಿದೆ, ಆದರೆ ಈ ಮೊದಲು ಮನೆಯನ್ನು ಮುಟ್ಟುವುದಿಲ್ಲ ಎಂದು ಸರ್ಕಾರ ಭರವಸೆ ನೀಡಿತ್ತು ಎಂದು ಅವರು ಹೇಳಿದರು.

ಈಶಾನ್ಯ ದೆಹಲಿ ಸಂಸದ ಮನೋಜ್‌ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ಹಸನ್‌ ಅವರಿಗೆ ಪ್ರಧಾನ್‌ ಮಂತ್ರಿ ಆವಾಸ್‌ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡುವುದಾಗಿ ತಿಳಿಸಿದ್ದಾರೆ.

ಟಿಎಂಸಿಯ ರಾಜ್ಯಸಭಾ ಸಂಸದೆ ಸಾಗರಿಕಾ ಘೋಸ್ ಅವರು ಹಸನ್‌ ಮನೆ ಧ್ವಂಸವನ್ನು ದುರಂತ ಮತ್ತು ನಾಚಿಕೆಗೇಡು ಎಂದು ಬಣ್ಣಿಸಿದ್ದಾರೆ. ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ತನ್ನ ತಂಡದೊಂದಿಗೆ ರಕ್ಷಿಸಿದ ಧೀರ ವಕೀಲ್ ಹಾಸನ್ ಅವರ ಮನೆಯನ್ನು ಕೆಡವಲಾಗಿದೆ. ಒಮ್ಮೆ ಹೀರೋ ಆಗಿದ್ದವರು ಇಂದು ನಿರಾಶ್ರಿತರಾಗಿದ್ದಾರೆ. ನಮ್ಮ ಧೈರ್ಯಶಾಲಿ ನಾಗರಿಕರಿಗೆ ನಾವು ಈ ರೀತಿ ಪ್ರತಿಫಲ ನೀಡುವುದಾ ಎಂದು ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ ನಲ್ಲಿ ಪ್ರಶ್ನಿಸಿದ್ದಾರೆ.

ಕಳೆದ ವರ್ಷ ನವೆಂಬರ್ 15ರಂದು ಕುಸಿದ ಸುರಂಗದಿಂದ ಸಿಕ್ಕಿಬಿದ್ದ 41 ಕಾರ್ಮಿಕರನ್ನು ರಕ್ಷಿಸುವ ಎಲ್ಲಾ ಪ್ರಯತ್ನಗಳು ಅಪೇಕ್ಷಿತ ಫಲಿತಾಂಶಗಳನ್ನು ನೀಡದಿದ್ದಾಗ ಹಸನ್‌ ಅವರ ರ್ಯಾಟ್‌ ಕಾರ್ಯಾಚರಣೆಯ  ತಂಡವನ್ನು ಸಿಲ್ಕ್ಯಾರಾಕ್ಕೆ ಕರೆಸಲಾಯಿತು. ಅವರ ತಂಡವು ಸುರಂಗದಲ್ಲಿ ಸಿಕ್ಕಿಬಿದ್ದಿದ್ದ 41 ಕಾರ್ಮಿಕರನ್ನು ಯಶಸ್ವಿಯಾಗಿ ಸ್ಥಳಾಂತರಿಸಿತ್ತು. ತಮ್ಮ ಅಮೋಘ ಕಾರ್ಯಾಚರಣೆಗೆ  ಉತ್ತರಾಖಂಡ ಮುಖ್ಯಮಂತ್ರಿ ಘೋಷಿಸಿದ ಪರಿಹಾರ ಮೊತ್ತವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದರು.

ಇದನ್ನು ಓದಿ: ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...