Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...