Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...