Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...