Homeಮುಖಪುಟಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

ಆರೋಪಿಗಳ ಆಸ್ತಿ ಧ್ವಂಸ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ: ನ್ಯಾಯಮೂರ್ತಿ ಉಜ್ಜಲ್ ಭುಯಾನ್

- Advertisement -
- Advertisement -

ಯಾವುದೇ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುದು ಭಾರತದ ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸುವುದಕ್ಕೆ ಸಮಾನ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠದ ಹೊಸ ಕಾನೂನು ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿ, “ನ್ಯಾಯಾಲಯಗಳು ಪ್ರಕರಣದ ಬಗ್ಗೆ ಅಂತಿಮ ತೀರ್ಪು ನೀಡುವ ಮುನ್ನವೇ ಆರೋಪಿಗಳ ಮನೆಗಳು ಸೇರಿದಂತೆ ಇತರ ಆಸ್ತಿಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಪರಿಪಾಠ ಕೆಲ ರಾಜ್ಯಗಳಲ್ಲಿ ಇದೆ. ಇದು ಸಂವಿಧಾನದ ಮೇಲೆ ಬುಲ್ಡೋಝರ್ ಚಲಾಯಿಸಿದಂತೆ. ಕಾನೂನಿನ ಆಳ್ವಿಕೆಯ ಪರಿಕಲ್ಪನೆಯ ನಿರಾಕರಣೆಯಾಗಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸದಿದ್ದರೆ, ನಮ್ಮ ನ್ಯಾಯ ವಿತರಣಾ ವ್ಯವಸ್ಥೆಯೇ ನಾಶವಾಗಲಿದೆ” ಎಂದಿದ್ದಾರೆ.

ಬುಲ್ಡೋಝರ್ ಕ್ರಮ ಕಾನೂನುಬಾಹಿರ ಎಂದು ಘೋಷಿಸಿದ ಮತ್ತು ಅಕ್ರಮ ಕಟ್ಟಡಗಳ ತೆರವಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ, “ಈ ವಿಷಯವು ಆರೋಪಿಯ ನ್ಯಾಯಯುತ ವಿಚಾರಣೆಯ ಹಕ್ಕನ್ನು ಮಾತ್ರವಲ್ಲದೆ, ಸಂವಿಧಾನದ ವಿಧಿ 21ರ ಅಡಿಯಲ್ಲಿ ಕಲ್ಪಿಸಲಾದ ಬದುಕುವ ಹಕ್ಕಿನ ಭಾಗವಾಗಿ ಗುರುತಿಸಲ್ಪಟ್ಟ ಆಶ್ರಯದ ಹಕ್ಕನ್ನೂ ಕಸಿದುಕೊಳ್ಳುತ್ತದೆ. ಆರೋಪಿಯ ಮನೆ ಕಡೆವಿದರೆ, ಆತನ ಮುಗ್ಧ ಕುಟುಂಬ ಸದಸ್ಯರು ಕೂಡ ತೊಂದರೆ ಅನುಭವಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಮನೆಯ ಮಾಲೀಕ ಆರೋಪಿ, ಅಪರಾಧಿ ಆಗಿರಬಹುದು. ಆದರೆ, ಆತನ ಜೊತೆಗೆ ತಾಯಿ, ತಂಗಿ, ಹೆಂಡತಿ, ಮಕ್ಕಳು ವಾಸಿಸುತ್ತಾರೆ. ಅವರು ಮಾಡಿದ ತಪ್ಪೇನು? ಮನೆ ಕೆಡವಿದರೆ ಅವರು ಎಲ್ಲಿಗೆ ಹೋಗಬೇಕು? ಅವರ ತಲೆಯ ಮೇಲಿನ ಸೂರು ಕಿತ್ತುಕೊಳ್ಳುವುದು ಎಷ್ಟು ಸರಿ? ಆರೋಪಿ, ಅಪರಾಧಿ ಆದ ತಕ್ಷಣ, ಅವರ ಮನೆ ಕೆಡವಬೇಕು ಎಂದರ್ಥವಲ್ಲ” ಎಂದಿದ್ದಾರೆ.

“ಭಾರತೀಯ ನ್ಯಾಯಾಂಗದಲ್ಲಿ ಕೋರ್ಸ್ ಕರೆಕ್ಷನ್‌ಗೆ ಸಾಕಷ್ಟು ಅವಕಾಶವಿದೆ ಎಂದ ನ್ಯಾಯಮೂರ್ತಿ ಭುಯಾನ್, ಸುಪ್ರೀಂ ಕೋರ್ಟ್ ಅಂತಿಮ ನ್ಯಾಯಾಲಯವಾಗಿರುವುದರಿಂದ ಅದು ‘ಸುಪ್ರೀಂ’ ಆಗಿದೆ. ಅದರ ಮೇಲೆ ನ್ಯಾಯಾಲಯ ಇದ್ದಿದ್ದರೆ, ಸುಪ್ರೀಂ ಕೋರ್ಟ್‌ನ ಅನೇಕ ತೀರ್ಪುಗಳನ್ನು ಮರುಪರಿಶೀಲಿಸಲಾಗುತ್ತಿತ್ತು” ಎಂದು ಹೇಳಿದ್ದಾರೆ.

“ನ್ಯಾಯಾಂಗ ನಿರ್ಧಾರಗಳಲ್ಲಿ ಸ್ಥಿರತೆ ಇರಬೇಕು. ಕಾನೂನನ್ನು ದಾವೆ ಹೂಡಿದವರಿಗೆ ಬೇಕಾದಂತೆ ಅನ್ವಯಿಸಲು ಆಗುವುದಿಲ್ಲ. ನಮ್ಮ ಹಕ್ಕು ಆಧಾರಿತ ನ್ಯಾಯಾಶಾಸ್ತ್ರ ಮಾನವ ಹಕ್ಕುಗಳನ್ನು ದೊರಕಿಸಿಕೊಡಬೇಕು. ಅಲ್ಲದೆ, ಹಕ್ಕುಗಳನ್ನು ಕಿತ್ತುಕೊಳ್ಳುವಂತಿರಬಾರದು” ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾನೂನು ವಿದ್ಯಾರ್ಥಿಗಳು ವಿಮರ್ಶಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳುವಂತೆ ನ್ಯಾಯಮೂರ್ತಿ ಭುಯಾನ್ ಕಿವಿಮಾತು ಹೇಳಿದ್ದು, ನ್ಯಾಯಾಂಗದ ನಿರ್ಧಾರಗಳನ್ನು ಪ್ರಶ್ನಿಸುವ ಮತ್ತು ವಿಶ್ಲೇಷಿಸುವುದರ ಮಹತ್ವವನ್ನು ಒತ್ತಿ ಹೇಳಿದ್ದಾರೆ.

“ಕಾನೂನು ವಿದ್ಯಾರ್ಥಿಗಳಾದ ನಾವು ವಿಮರ್ಶಾತ್ಮಕ ಮನಸ್ಥಿತಿ, ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಸುಪ್ರೀಂ ಕೋರ್ಟ್‌ನ ತೀರ್ಪುಗಳು ಸೇರಿದಂತೆ ಬರುವ ಎಲ್ಲವನ್ನೂ ನಿರ್ಲಕ್ಷಿಸಬಾರದು. ನಾವು ತೀರ್ಪುಗಳನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಬೇಕು. ಸಹಜವಾಗಿ, ತೀರ್ಪಿನ ಟೀಕೆ ದೃಢವಾದ ಕಾನೂನು ಆಧಾರದ ಮೇಲೆ ಇರಬೇಕು. ಅಲ್ಲದೆ ಯಾವುದೇ ಉದ್ದೇಶದಿಂದ ಖಂಡಿಸಲು ಸಾಧ್ಯವಿಲ್ಲ. ಪ್ರಶ್ನಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ. ಅನೇಕ ತೀರ್ಪುಗಳನ್ನು ನಾವು ವಿಮರ್ಶಾತ್ಮಕವಾಗಿ ಪರೀಕ್ಷಿಸಬೇಕು” ಎಂದು ನ್ಯಾಯಮೂರ್ತಿ ಭುಯಾನ್ ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗುವ ಮುನ್ನವೇ ಆರೋಪಿಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವುವ ಕ್ರಮವನ್ನು 2017ರಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಪ್ರಾರಂಭಿಸಿತು. ಯೋಗಿ ಸರ್ಕಾರ ಇದುವರೆಗೆ ಅನೇಕ ಆರೋಪಿಗಳ ಮನೆಗಳನ್ನು ಕೆಡವಿದೆ. ಇಂತಹ ಹಲವು ಪ್ರಕರಣಗಳಲ್ಲಿ ಹಲವು ಬಾರಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡಿದೆ.

ಕಳೆದ ವರ್ಷದ (2024) ರ ನವೆಂಬರ್‌ 13ರಂದು ಈ ಸಂಬಂಧ ತೀರ್ಪೊಂದನ್ನು ಪ್ರಕಟಿಸಿರುವ ಸುಪ್ರೀಂ ಕೋರ್ಟ್ “ಕಾರ್ಯಾಂಗ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ನ್ಯಾಯದ ಹೆಸರಿನಲ್ಲಿ ಆರೋಪಿಯನ್ನು ಅಪರಾಧಿ ಎಂದು ಘೋಷಿಸುವುದು ಮತ್ತು ಅವರ ಕಟ್ಟಡಗಳನ್ನು ಕೆಡುವುದು ಅಸಂವಿಧಾನಿಕ” ಎಂದು ಹೇಳಿದೆ. ಅಕ್ರಮ ಕಟ್ಟಡಗಳನ್ನು ಕೆಡವುದಕ್ಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಆದರೆ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳ ಮನೆ ಕೆಡವುವ ಪದ್ದತಿಯನ್ನು ಮುಂದುವರೆಸಿದೆ. ನಾಗ್ಪುರ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಬಂಧಿಸಲಾಗಿರುವ ಅಲ್ಪಸಂಖ್ಯಾತ ಪ್ರಜಾಸತ್ತಾತ್ಮಕ ಪಕ್ಷದ (MDP) ನಾಯಕ ಫಾಹೀಮ್ ಖಾನ್ ಅವರ ಮನೆಯನ್ನು ಸೋಮವಾರ (ಮಾ.24) ಅಧಿಕಾರಿಗಳು ಬುಲ್ಡೋಝರ್ ಮೂಲಕ ಧ್ವಂಸಗೊಳಿಸಿದ್ದಾರೆ.

ಮನೆ ಕೆಡವುದಕ್ಕೆ ‘ಅಕ್ರಮ ನಿರ್ಮಾಣ’ ಎಂಬ ಕಾರಣವನ್ನು ಸರ್ಕಾರ ನೀಡುತ್ತದೆ. ಯಾವುದಾದರು ಪ್ರಕರಣದ ಆರೋಪಿಗಳಾದ ತಕ್ಷಣ ಅವರ ಕಟ್ಟಡ ಅಕ್ರಮವಾಗುವುದು ಹೇಗೆ? ಅಕ್ರಮವಾಗಿದ್ದರೆ ಅಧಿಕಾರಿಗಳು ಮೊದಲೇ ಕಾನೂನು ಪ್ರಕಾರ ತೆರವುಗೊಳಿಸಬೇಕಿತ್ತಲ್ಲವೇ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಸಾರ್ವಜನಿಕ ವಲಯದಲ್ಲಿದೆ.

ನಾಗಪುರ ಹಿಂಸಾಚಾರ ಪ್ರಕರಣ: ಆರೋಪಿ ಫಾಹೀಮ್ ಖಾನ್ ಮನೆ  ಧ್ವಂಸಗೊಳಿಸಿದ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...