Homeಮುಖಪುಟಆದೇಶ ಉಲ್ಲಂಘಿಸಿ 'ಬುಲ್ಡೋಝರ್ ಕಾರ್ಯಾಚರಣೆ' : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಆದೇಶ ಉಲ್ಲಂಘಿಸಿ ‘ಬುಲ್ಡೋಝರ್ ಕಾರ್ಯಾಚರಣೆ’ : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ತನ್ನ ಆದೇಶ ಉಲ್ಲಂಘಿಸಿ ಬುಲ್ಡೋಝರ್ ಕಾರ್ಯಾಚರಣೆ ನಡೆಸಿದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಸೆ.30) ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು 2024 ರ ಸೆಪ್ಟೆಂಬರ್ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನು ಉಲ್ಲಂಘಿಸಿ ಕಟ್ಟಡಗಳನ್ನು ಕೆಡವಿದ ಅಸ್ಸಾಂ ಸರ್ಕಾರದ ವಿರುದ್ದ, ಅಲ್ಲಿನ 47 ನಾಗರಿಕರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಸ್ಸಾಂ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಮೂರು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಈ ಮಧ್ಯೆ ಕಕ್ಷಿದಾರರು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ, “ನ್ಯಾಯಾಲಯದ ಆದೇಶದ ಘೋರ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 17ರಂದು ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್, ಸಾರ್ವಜನಿಕ ರಸ್ತೆ, ಫುಟ್‌ಪಾತ್‌, ರೈಲು ಮಾರ್ಗಗಳ ನಿರ್ಮಾಣಕ್ಕಾಗಿ ಮತ್ತು ಜಲಮೂಲಗಳ ಅತಿಕ್ರಮಣಗಳ ತೆರವು ಹೊರತು, ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಸೂಚಿಸಿತ್ತು.

ಈ ಆದೇಶ ಹೊರ ಬಿದ್ದ ಸ್ವಲ್ಪ ದಿನಗಳ ನಂತರ ಅಸ್ಸಾಂ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಅತಿಕ್ರಮಣ ಮಾಡಲಾಗಿದೆ ಎಂದು ಅಸ್ಸಾಂ ಸರ್ಕಾರದ ಅಧಿಕಾರಿಗಳು ನಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಮಾಡುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ಕಾರ ಮನೆಗಳನ್ನು ಕೆಡವಿದೆ ಎಂದು ಇಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲ ಹುಝೆಫಾ ಅಹ್ಮದಿ, ಬುಲ್ಡೋಝರ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದ್ದರಿಂದ
ಸರ್ಕಾರ ಯಥಾಸ್ಥಿತಿ ಕಾಪಾಡಿಕೊಳ್ಳಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಿದ್ದಾರೆ.

ಅಸ್ಸಾಂನ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳ ನಿವಾಸಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನಾವು ನಮ್ಮ ಮನೆಗಳ ಜಮೀನಿನ ಮೂಲ ಪಟ್ಟದಾರರ (ಭೂಮಾಲೀಕರು) ಜೊತೆ ಒಪ್ಪಂದ ಮಾಡಿಕೊಂಡು ಹಲವಾರು ದಶಕಗಳಿಂದ ಮನೆ ಕಟ್ಟಿ ವಾಸಿಸುತ್ತಿದ್ದೇವೆ. ನಾವು ಭೂಮಿಯ ಮಾಲೀಕರಲ್ಲದಿದ್ದರೂ, ನಮ್ಮ ಮನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ನಮ್ಮ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ Xನ ಸೆಕ್ಷನ್ 165(3) ಕ್ಕೆ ವಿರುದ್ದವಾಗಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಮನೆಗಳನ್ನು ತೆರವುಗೊಳಿಸುವ ಮುನ್ನ ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯ ಸಮಯ ಒದಗಿಸಬೇಕು. ಆದರೆ, ಇವೆಲ್ಲವನ್ನೂ ಸರ್ಕಾರ ಉಲ್ಲಂಘಿಸಿ ಎಂದಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ: ಚುನಾವಣಾ ಪ್ರಚಾರದ ವೇಳೆ ಲೋಕಸಭಾ ಸಂಸದ ಇಂಜಿನಿಯರ್ ರಶೀದ್ ಕಾರಿನ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...